ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗುರುವಾರ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು ಪ್ರೀತಿ, ವಿಶ್ವಾಸದಿಂದ , ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ ಅಭಿವೃದ್ಧಿ ಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು.