ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ, ಒಳ ಮೀಸಲಾತಿ ಕಲ್ಪಿಸುವ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿರಲಿಲ್ಲ. ಆದರೆ, ಬಿಜೆಪಿ ಸರ್ಕಾರ ಆ ಕೆಲಸ ಮಾಡಿದೆ. ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ ಸರ್ಕಾರವನ್ನು ಅವರು ಅಭಿನಂದಿಸದೇ ಇರಬಹುದು. ಆದರೆ, ವಾಸ್ತವ ಸಂಗತಿಯನ್ನು ಒಪ್ಪಿಕೊಳ್ಳಬೇಕಲ್ಲವೆ ಎಂದು ಅವರು ಪ್ರಶ್ನಿಸಿದರು.