‘ಬನಾರಸ್, ದೆಹಲಿ– ಜೆಎನ್ಯು, ಮದ್ರಾಸ್, ಮಧುರೈ ವಿಶ್ವವಿದ್ಯಾಲಯಗಳಲ್ಲಿದ್ದ ಕನ್ನಡ ವಿಭಾಗವನ್ನು ಮುಚ್ಚಲಾಗಿದೆ. ಉಳಿದಿರುವುದು ಮುಂಬೈ ವಿಶ್ವವಿದ್ಯಾಲಯದಲ್ಲಿ ಮಾತ್ರ. ಅಲ್ಲಿ ಕನ್ನಡಿಗರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡದವರು ಹೆಚ್ಚಿದ್ದಾರೆ. ದಕ್ಷಿಣ ಕನ್ನಡದವರಲ್ಲಿರುವ ಕ್ರಿಯಾಶೀಲತೆ ನಮ್ಮ ಮೈಸೂರು ಭಾಗದವರಿಗೆ ಇಲ್ಲ. ಹೀಗಾಗಿ ಅಲ್ಲಿರುವ ದಕ್ಷಿಣ ಕನ್ನಡದವರು ಹಿಡಿದ ಕೆಲಸ ಮಾಡುತ್ತಾರೆ. ಅಲ್ಲಿ ಕನ್ನಡ ವಿಭಾಗ ಮುಂದುವರಿಯಲು ಶ್ರಮಿಸುತ್ತಿದ್ದಾರೆ’ ಎಂದರು.