<p><strong>ಹುಬ್ಬಳ್ಳಿ: ‘</strong>ಪಶ್ಚಿಮ ಏಷ್ಯಾದ ಯುದ್ಧ ಸಂಘರ್ಷದ ಪರಿಸ್ಥಿತಿಯಲ್ಲೂ ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಇಲ್ಲ. ಜನರು ಈ ವಿಷಯದಲ್ಲಿ ಆತಂಕ ಪಡುವ ಅಗತ್ಯವಿಲ್ಲ’ ಎಂದು ಕೇಂದ್ರ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ಶನಿವಾರ ಸುದ್ದಿಗಾರರಿಗೆ ಹೇಳಿದರು. </p><p>‘ಗೃಹ, ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಿಲ್ಲ. ಜನರಿಗೆ ಪೂರೈಸು<br>ವಷ್ಟು ದಾಸ್ತಾನಿದೆ. ಆದರೆ, ಕಾಂಗ್ರೆಸ್ ಸರ್ಕಾರವು ಜನರನ್ನು ಕೇಂದ್ರದ ವಿರುದ್ಧ ಎತ್ತಿಕಟ್ಟಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದೆ’ ಎಂದರು. </p><p>‘ದೇಶದಲ್ಲಿ ಎಲ್ಲಿಯೂ ಎಲ್ಪಿಜಿ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಹಾಗೂ ಸಿಮೆಎಣ್ಣೆ ಕೊರತೆ ಕುರಿತು ದೂರುಗಳು ಬಂದಿಲ್ಲ. ಜನರು ಧಾವಂತದಿಂದ ಮುಂಚಿತವಾಗಿಯೇ ಸಿಲಿಂಡರ್ ಬುಕ್ ಮಾಡಲು ಯತ್ನಿಸುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಕೆಲ ನಿಬಂಧನೆ ವಿಧಿಸಲಾಗಿದೆ’ ಎಂದು ತಿಳಿಸಿದರು. </p><p>‘ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಅಡುಗೆ ಅನಿಲ ಪೂರೈಕೆಯಾಗುತ್ತಿಲ್ಲ. ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡಿ’ ಎಂದು ಜನರನ್ನು ಎತ್ತಿಕಟ್ಟುತ್ತಿರುವುದು<br>ಅವರ ನೈತಿಕ ಅಧಃಪತನವನ್ನು ತೋರಿಸುತ್ತದೆ’ ಎಂದು ಟೀಕಿಸಿದರು. </p><p>‘ದೇಶದಲ್ಲಿ ಹಿಂದೆ ಸಮಸ್ಯೆ ಉಂಟಾದಾಗ ವಿರೋಧಪಕ್ಷದಲ್ಲಿದ್ದನಾವು ಜವಾಬ್ದಾರಿಯಿಂದ ವರ್ತಿಸಿದ್ದೆವು.ಆದರೀಗ ವಿಪಕ್ಷ ಕಾಂಗ್ರೆಸ್ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>‘ದೇಶದಲ್ಲಿ ಈಗಾಗಲೇ ಶೇ 30ರಷ್ಟು ಎಲ್ಪಿಜಿ ಸಿಲಿಂಡರ್ ಉತ್ಪಾದನೆ ಹೆಚ್ಚಿಸಲಾಗಿದೆ. ರಷ್ಯಾ, ಆಫ್ರಿಕಾ, ಅಮೆರಿಕ ಹಾಗೂ ಕೆನಡಾದಿಂದಲೂ ಆಮದು ಮಾಡಿಕೊಳ್ಳಲಾಗುವುದು. ಆ ಸಾಮರ್ಥ್ಯ ಭಾರತಕ್ಕೆ ಇದೆ. ಯಾವುದೇ ಕಾರಣಕ್ಕೂ ಜನರು ಆತಂಕಕ್ಕೆ ಒಳಗಾಗಬಾರದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: ‘</strong>ಪಶ್ಚಿಮ ಏಷ್ಯಾದ ಯುದ್ಧ ಸಂಘರ್ಷದ ಪರಿಸ್ಥಿತಿಯಲ್ಲೂ ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಇಲ್ಲ. ಜನರು ಈ ವಿಷಯದಲ್ಲಿ ಆತಂಕ ಪಡುವ ಅಗತ್ಯವಿಲ್ಲ’ ಎಂದು ಕೇಂದ್ರ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ಶನಿವಾರ ಸುದ್ದಿಗಾರರಿಗೆ ಹೇಳಿದರು. </p><p>‘ಗೃಹ, ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಿಲ್ಲ. ಜನರಿಗೆ ಪೂರೈಸು<br>ವಷ್ಟು ದಾಸ್ತಾನಿದೆ. ಆದರೆ, ಕಾಂಗ್ರೆಸ್ ಸರ್ಕಾರವು ಜನರನ್ನು ಕೇಂದ್ರದ ವಿರುದ್ಧ ಎತ್ತಿಕಟ್ಟಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದೆ’ ಎಂದರು. </p><p>‘ದೇಶದಲ್ಲಿ ಎಲ್ಲಿಯೂ ಎಲ್ಪಿಜಿ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಹಾಗೂ ಸಿಮೆಎಣ್ಣೆ ಕೊರತೆ ಕುರಿತು ದೂರುಗಳು ಬಂದಿಲ್ಲ. ಜನರು ಧಾವಂತದಿಂದ ಮುಂಚಿತವಾಗಿಯೇ ಸಿಲಿಂಡರ್ ಬುಕ್ ಮಾಡಲು ಯತ್ನಿಸುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಕೆಲ ನಿಬಂಧನೆ ವಿಧಿಸಲಾಗಿದೆ’ ಎಂದು ತಿಳಿಸಿದರು. </p><p>‘ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಅಡುಗೆ ಅನಿಲ ಪೂರೈಕೆಯಾಗುತ್ತಿಲ್ಲ. ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡಿ’ ಎಂದು ಜನರನ್ನು ಎತ್ತಿಕಟ್ಟುತ್ತಿರುವುದು<br>ಅವರ ನೈತಿಕ ಅಧಃಪತನವನ್ನು ತೋರಿಸುತ್ತದೆ’ ಎಂದು ಟೀಕಿಸಿದರು. </p><p>‘ದೇಶದಲ್ಲಿ ಹಿಂದೆ ಸಮಸ್ಯೆ ಉಂಟಾದಾಗ ವಿರೋಧಪಕ್ಷದಲ್ಲಿದ್ದನಾವು ಜವಾಬ್ದಾರಿಯಿಂದ ವರ್ತಿಸಿದ್ದೆವು.ಆದರೀಗ ವಿಪಕ್ಷ ಕಾಂಗ್ರೆಸ್ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>‘ದೇಶದಲ್ಲಿ ಈಗಾಗಲೇ ಶೇ 30ರಷ್ಟು ಎಲ್ಪಿಜಿ ಸಿಲಿಂಡರ್ ಉತ್ಪಾದನೆ ಹೆಚ್ಚಿಸಲಾಗಿದೆ. ರಷ್ಯಾ, ಆಫ್ರಿಕಾ, ಅಮೆರಿಕ ಹಾಗೂ ಕೆನಡಾದಿಂದಲೂ ಆಮದು ಮಾಡಿಕೊಳ್ಳಲಾಗುವುದು. ಆ ಸಾಮರ್ಥ್ಯ ಭಾರತಕ್ಕೆ ಇದೆ. ಯಾವುದೇ ಕಾರಣಕ್ಕೂ ಜನರು ಆತಂಕಕ್ಕೆ ಒಳಗಾಗಬಾರದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>