‘ಕೋಲಾರದಲ್ಲಿ ಈಗಲೂ ಕಾಲ ಮಿಂಚಿಲ್ಲ. ಮುಂಬರುವ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಥಾನಗಳನ್ನು ಗೆಲ್ಲಬೇಕಾದರೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ನಾನು ಮೊದಲಿನಿಂದಲೂ ಈ ವಿಚಾರವನ್ನು ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಮನಕ್ಕೆ ತಂದಿದ್ದೇನೆ. ಅವರು ಸಮಸ್ಯೆ ಬಗೆಹರಿಸಿದ್ದರೆ ಕೋಲಾರದಲ್ಲಿ ಸೋಲಾಗುತ್ತಿರಲಿಲ್ಲ. ಅಲ್ಲಿನ ನಾಯಕರಿಗೆ ಈಗಲಾದರೂ ಬುದ್ಧಿ ಹೇಳಿ, ಸಮಸ್ಯೆ ಸರಿಪಡಿಸಲಿ’ ಎಂದರು.