ವಿಧಾನಪರಿಷತ್ತಿನಲ್ಲಿ ಎನ್.ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಪ್ಪು ಕಲ್ಪನೆಯಿಂದ ಹಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಸೆಸ್ ಹಣಕ್ಕೆ ಆದಾಯ ತೆರಿಗೆ ಪಾವತಿಸುವ ಅಗತ್ಯ ಇಲ್ಲ. ಈ ಪ್ರಕರಣದಲ್ಲಿ ನಮ್ಮ ಇಲಾಖೆ ಮೇಲ್ಮನವಿ ಸಲ್ಲಿಸಿದೆ. ಮುಟ್ಟುಗೋಲು ಹಾಕಿಕೊಂಡ ಹಣ ಮರಳಿ ಸಿಗುತ್ತದೆ ಎಂಬ ವಿಶ್ವಾಸ ಇದೆ’ ಎಂದರು.