<p><strong>ಬೆಂಗಳೂರು: </strong>‘ರಾಜ್ಯಪಾಲ ಹುದ್ದೆಯೂ ಸೇರಿದಂತೆ, ಕೇಂದ್ರದಲ್ಲಿ ಯಾವುದೇ ಸ್ಥಾನಮಾನ ವಹಿಸುವುದಿಲ್ಲ’ ಎಂದು ಬಿ.ಎಸ್. ಯಡಿಯೂರಪ್ಪ ಕಡ್ಡಿ ಮುರಿದಂತೆ ಹೇಳಿದರು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ರಾಜಭವನದ ಮುಂಭಾಗದಲ್ಲಿ ಸುದ್ದಿಗಾರರಿಗೆ ಈ ಮಾತುಗಳನ್ನು ಹೇಳುವಾಗ ಅವರು ನಿರಾಳರಾಗಿದ್ದರು.</p>.<p>ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ ಗದ್ಗದಿತರಾಗಿದ್ದ ಯಡಿಯೂರಪ್ಪ ಅವರ ಮುಖ ಛಾಯೆ, ಪದತ್ಯಾಗದ ಬಳಿಕ ಸಂಪೂರ್ಣವಾಗಿ ಬದಲಾಗಿತ್ತು. ‘ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಹೆಸರನ್ನು ನಾನು ಪ್ರಸ್ತಾಪಿಸುವುದಿಲ್ಲ. ಅದು ಹೈಕಮಾಂಡ್ಗೆ ಬಿಟ್ಟದ್ದು. ಅವರು ಯಾರನ್ನು ಮಾಡಿದರೂ ಸಹಕಾರ ಕೊಡುತ್ತೇನೆ’ ಎಂದರು.</p>.<p>‘ರಾಜೀನಾಮೆ ನೀಡುವಂತೆ ದೆಹಲಿಯಿಂದ ಯಾವುದೇ ಒತ್ತಡ ಇಲ್ಲ. ನಾನೇ ನಿರ್ಧಾರ ಮಾಡಿ ರಾಜೀನಾಮೆ ಕೊಟ್ಟು, ಬೇರೆಯವರಿಗೆ<br />ಅವಕಾಶ ಸಿಗಬೇಕು, ಬೇರೆಯವರೂ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದೇನೆ’ ಎಂದು ಅವರು ಹೇಳಿದರು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ನೂರಕ್ಕೆ ನೂರು ಸಕ್ರಿಯ ರಾಜಕೀಯದಲ್ಲಿ ಮುಂದುವರಿಯುತ್ತೇನೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ನಾಳೆಯಿಂದಲೇ ಆ ಕೆಲಸ ಆರಂಭಿಸುತ್ತೇನೆ. ಸಂಘಟನೆಯನ್ನು ಬಲಪಡಿಸುತ್ತೇನೆ. ಯಾವ ಕಾರಣಕ್ಕೂ ರಾಜಕೀಯದಿಂದ ಹಿಂದೆಸರಿಯುವ ಪ್ರಶ್ನೆ ಇಲ್ಲ. ಆಬಗ್ಗೆ ಅನುಮಾನ ಬೇಡ’ ಎಂದು ಹೇಳಿದರು.</p>.<p>‘75 ವಯಸ್ಸು ದಾಟಿದವರಿಗೆ ದೇಶದ ಎಲ್ಲೂ ಪಕ್ಷ ಅಧಿಕಾರ ಕೊಟ್ಟಿಲ್ಲ. ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧಾರ ಮಾಡಿದ್ದೆ. ಎರಡು ವರ್ಷ ತುಂಬಿದ ಶುಭ ಸಂದರ್ಭದಲ್ಲಿ ನೀಡುವುದುಒಳ್ಳೆಯದು ಎಂದು ಕೊಟ್ಟಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ರಾಜ್ಯಪಾಲ ಹುದ್ದೆಯೂ ಸೇರಿದಂತೆ, ಕೇಂದ್ರದಲ್ಲಿ ಯಾವುದೇ ಸ್ಥಾನಮಾನ ವಹಿಸುವುದಿಲ್ಲ’ ಎಂದು ಬಿ.ಎಸ್. ಯಡಿಯೂರಪ್ಪ ಕಡ್ಡಿ ಮುರಿದಂತೆ ಹೇಳಿದರು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ರಾಜಭವನದ ಮುಂಭಾಗದಲ್ಲಿ ಸುದ್ದಿಗಾರರಿಗೆ ಈ ಮಾತುಗಳನ್ನು ಹೇಳುವಾಗ ಅವರು ನಿರಾಳರಾಗಿದ್ದರು.</p>.<p>ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ ಗದ್ಗದಿತರಾಗಿದ್ದ ಯಡಿಯೂರಪ್ಪ ಅವರ ಮುಖ ಛಾಯೆ, ಪದತ್ಯಾಗದ ಬಳಿಕ ಸಂಪೂರ್ಣವಾಗಿ ಬದಲಾಗಿತ್ತು. ‘ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಹೆಸರನ್ನು ನಾನು ಪ್ರಸ್ತಾಪಿಸುವುದಿಲ್ಲ. ಅದು ಹೈಕಮಾಂಡ್ಗೆ ಬಿಟ್ಟದ್ದು. ಅವರು ಯಾರನ್ನು ಮಾಡಿದರೂ ಸಹಕಾರ ಕೊಡುತ್ತೇನೆ’ ಎಂದರು.</p>.<p>‘ರಾಜೀನಾಮೆ ನೀಡುವಂತೆ ದೆಹಲಿಯಿಂದ ಯಾವುದೇ ಒತ್ತಡ ಇಲ್ಲ. ನಾನೇ ನಿರ್ಧಾರ ಮಾಡಿ ರಾಜೀನಾಮೆ ಕೊಟ್ಟು, ಬೇರೆಯವರಿಗೆ<br />ಅವಕಾಶ ಸಿಗಬೇಕು, ಬೇರೆಯವರೂ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದೇನೆ’ ಎಂದು ಅವರು ಹೇಳಿದರು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ನೂರಕ್ಕೆ ನೂರು ಸಕ್ರಿಯ ರಾಜಕೀಯದಲ್ಲಿ ಮುಂದುವರಿಯುತ್ತೇನೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ನಾಳೆಯಿಂದಲೇ ಆ ಕೆಲಸ ಆರಂಭಿಸುತ್ತೇನೆ. ಸಂಘಟನೆಯನ್ನು ಬಲಪಡಿಸುತ್ತೇನೆ. ಯಾವ ಕಾರಣಕ್ಕೂ ರಾಜಕೀಯದಿಂದ ಹಿಂದೆಸರಿಯುವ ಪ್ರಶ್ನೆ ಇಲ್ಲ. ಆಬಗ್ಗೆ ಅನುಮಾನ ಬೇಡ’ ಎಂದು ಹೇಳಿದರು.</p>.<p>‘75 ವಯಸ್ಸು ದಾಟಿದವರಿಗೆ ದೇಶದ ಎಲ್ಲೂ ಪಕ್ಷ ಅಧಿಕಾರ ಕೊಟ್ಟಿಲ್ಲ. ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧಾರ ಮಾಡಿದ್ದೆ. ಎರಡು ವರ್ಷ ತುಂಬಿದ ಶುಭ ಸಂದರ್ಭದಲ್ಲಿ ನೀಡುವುದುಒಳ್ಳೆಯದು ಎಂದು ಕೊಟ್ಟಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>