<p><strong>ಬೆಂಗಳೂರು</strong>: ‘ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆಯನ್ನು ನಿಲ್ಲಿಸಲಾಗುವುದು. ಕೌನ್ಸೆಲಿಂಗ್ ಆಧಾರದಲ್ಲಿ ಮಾತ್ರ ವರ್ಗಾವಣೆ ಮಾಡಲಾಗುವುದು’ ಎಂದು ಕೌಶಲಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ಅವರು ಹೇಳಿದರು.</p>.<p>ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಭಾವ ಮತ್ತು ಶಿಫಾರಸು ಬಳಸಿ ಮಾಡಿಸಿಕೊಳ್ಳಲಾದ ವರ್ಗಾವಣೆಗಳಿಂದ ಇಲಾಖೆಯ ಕೆಲಸಗಳು ಪರಿಣಾಮಕಾರಿಯಾಗಿ ಆಗುತ್ತಿಲ್ಲ. ಈ ಪದ್ಧತಿಗೆ ಕಡಿವಾಣ ಹಾಕಬೇಕಿದೆ. ಸಿಬ್ಬಂದಿಗೆ ಆದ್ಯತೆಯ ಸ್ಥಳಗಳಲ್ಲಿ ಹುದ್ದೆ ಪಡೆಯಲು ಅನುವು ಮಾಡಿಕೊಡುವುದರಿಂದ ಕೆಲಸ ಪರಿಣಾಮಕಾರಿಯಾಗಲಿದೆ’ ಎಂದರು.</p>.<p>‘ಜೂನ್ 16ರ ಒಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಕೌನ್ಸೆಲಿಂಗ್ ಆಧಾರಿತ ವರ್ಗಾವಣೆಗೆ ಅಗತ್ಯ ಮಾರ್ಗಸೂಚಿಗಳನ್ನು ತಕ್ಷಣವೇ ರೂಪಿಸಿ’ ಎಂದು ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಅವರಿಗೆ ಸೂಚಿಸಿದರು.</p>.<p>‘ಪದವಿಗಳನ್ನು ಪಡೆದಿದ್ದರೂ ಹಲವರಿಗೆ ಕೌಶಲ್ಯದ ಕೊರತೆಯ ಕಾರಣದಿಂದ ಉದ್ಯೋಗ ಸಿಗುತ್ತಿಲ್ಲ. ಉದ್ಯೋಗ ಮೇಳಗಳಲ್ಲಿ ಆದ ನೇಮಕಾತಿಗಳ ದತ್ತಾಂಶ ಮತ್ತು ವರದಿಗಳು ಇದನ್ನೇ ಹೇಳುತ್ತವೆ. ಕೌಶಲಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರದೇ ಇರುವುದೇ ಇದು ಕಾರಣ. ಪದವಿ ಮತ್ತು ಕೌಶಲದ ನಡುವಣ ಈ ಅಂತರವನ್ನು ಇಲ್ಲವಾಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರದೇ ಇರುವ ಅಧಿಕಾರಿಗಳನ್ನು ಸಚಿವರು ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ನೋಟಿಸ್ ನೀಡಿ, ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದರು.</p>.<p><strong>ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ</strong>: ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆಗೆ ಪ್ರತ್ಯೇಕ ಸಭೆ ನಡೆಸಿದ ಸಚಿವ ಶರಣಪ್ರಕಾಶ ಪಾಟೀಲ, ‘ವೈದ್ಯಕೀಯ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಮತ್ತು ಹಿರಿಯ ನಿವಾಸಿ ಹುದ್ದೆಗಳ ಭರ್ತಿಯನ್ನು ತ್ವರಿತವಾಗಿ ನಡೆಸಬೇಕು’ ಎಂದು ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆಯನ್ನು ನಿಲ್ಲಿಸಲಾಗುವುದು. ಕೌನ್ಸೆಲಿಂಗ್ ಆಧಾರದಲ್ಲಿ ಮಾತ್ರ ವರ್ಗಾವಣೆ ಮಾಡಲಾಗುವುದು’ ಎಂದು ಕೌಶಲಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ಅವರು ಹೇಳಿದರು.</p>.<p>ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಭಾವ ಮತ್ತು ಶಿಫಾರಸು ಬಳಸಿ ಮಾಡಿಸಿಕೊಳ್ಳಲಾದ ವರ್ಗಾವಣೆಗಳಿಂದ ಇಲಾಖೆಯ ಕೆಲಸಗಳು ಪರಿಣಾಮಕಾರಿಯಾಗಿ ಆಗುತ್ತಿಲ್ಲ. ಈ ಪದ್ಧತಿಗೆ ಕಡಿವಾಣ ಹಾಕಬೇಕಿದೆ. ಸಿಬ್ಬಂದಿಗೆ ಆದ್ಯತೆಯ ಸ್ಥಳಗಳಲ್ಲಿ ಹುದ್ದೆ ಪಡೆಯಲು ಅನುವು ಮಾಡಿಕೊಡುವುದರಿಂದ ಕೆಲಸ ಪರಿಣಾಮಕಾರಿಯಾಗಲಿದೆ’ ಎಂದರು.</p>.<p>‘ಜೂನ್ 16ರ ಒಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಕೌನ್ಸೆಲಿಂಗ್ ಆಧಾರಿತ ವರ್ಗಾವಣೆಗೆ ಅಗತ್ಯ ಮಾರ್ಗಸೂಚಿಗಳನ್ನು ತಕ್ಷಣವೇ ರೂಪಿಸಿ’ ಎಂದು ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಅವರಿಗೆ ಸೂಚಿಸಿದರು.</p>.<p>‘ಪದವಿಗಳನ್ನು ಪಡೆದಿದ್ದರೂ ಹಲವರಿಗೆ ಕೌಶಲ್ಯದ ಕೊರತೆಯ ಕಾರಣದಿಂದ ಉದ್ಯೋಗ ಸಿಗುತ್ತಿಲ್ಲ. ಉದ್ಯೋಗ ಮೇಳಗಳಲ್ಲಿ ಆದ ನೇಮಕಾತಿಗಳ ದತ್ತಾಂಶ ಮತ್ತು ವರದಿಗಳು ಇದನ್ನೇ ಹೇಳುತ್ತವೆ. ಕೌಶಲಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರದೇ ಇರುವುದೇ ಇದು ಕಾರಣ. ಪದವಿ ಮತ್ತು ಕೌಶಲದ ನಡುವಣ ಈ ಅಂತರವನ್ನು ಇಲ್ಲವಾಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರದೇ ಇರುವ ಅಧಿಕಾರಿಗಳನ್ನು ಸಚಿವರು ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ನೋಟಿಸ್ ನೀಡಿ, ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದರು.</p>.<p><strong>ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ</strong>: ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆಗೆ ಪ್ರತ್ಯೇಕ ಸಭೆ ನಡೆಸಿದ ಸಚಿವ ಶರಣಪ್ರಕಾಶ ಪಾಟೀಲ, ‘ವೈದ್ಯಕೀಯ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಮತ್ತು ಹಿರಿಯ ನಿವಾಸಿ ಹುದ್ದೆಗಳ ಭರ್ತಿಯನ್ನು ತ್ವರಿತವಾಗಿ ನಡೆಸಬೇಕು’ ಎಂದು ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>