<p><strong>ಬೆಂಗಳೂರು:</strong>ನೂಕು ನುಗ್ಗಲು ಸಂಭವಿಸುವ ಆತಂಕ ಇರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು ತೆರೆಯದೇ ಇರಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.</p>.<p>ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ರಾಜ್ಯದ ಜನತೆ ಸರಳವಾಗಿ ತಮ್ಮ ಮನೆಯಲ್ಲೇ ಯುಗಾದಿ ಹಬ್ಬ ಆಚರಿಸಬೇಕು. ಇಂದಿರಾ ಕ್ಯಾಂಟಿನ್ ತೆರೆಯದಿರಲು ನಿರ್ಧಾರ ಮಾಡಿದ್ದೇವೆ. ಜನಸಂದಣಿ ಹೆಚ್ಚುವ ಭೀತಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ. ಜನ ಸರ್ಕಾರದ ಜತೆ ಸಹಕರಿಸಬೇಕು. ನಿಯಮ ಉಲ್ಲಂಘಿಸಿದರೆ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ. ಇದು ಅನಿವಾರ್ಯ,’ ಎಂದರು. </p>.<p>‘ಲಾಕ್ ಡೌನ್ಗೆ ನಾಗರಿಕರು ಸಹಕರಿಸುವ ಅಗತ್ಯವಿದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಮಾಡಿಕೊಡುತ್ತೇವೆ. ಜನರು ಆತಂಕಪಡುವ ಅವಶ್ಯಕತೆ ಇಲ್ಲ,’ ಎಂದು ಹೇಳಿದರು.</p>.<p>‘31ರವರೆಗೆ ಯಾರೂ ಮನೆಯಿಂದ ಹೊರ ಬರಬೇಡಿ. ಪೊಲೀಸರು ಕ್ರಮ ಕೈಗೊಂಡರೆ ಸರ್ಕಾರವನ್ನು ದೂಷಿಸಬೇಡಿ,’ ಎಂದು ಬಿಎಸ್ವೈ ಖಡಕ್ ಎಚ್ಚರಿಕೆ ನೀಡಿದ್ದಾರೆ.</p>.<p>ಹಾಲು ಮತ್ತು ದಿನಸಿ ಪದಾರ್ಥ ದರ ಹೆಚ್ಚಳ ಮಾಡಿ ಶೋಷಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನೂ ಅವರು ನೀಡಿದರು.</p>.<p>ಅಂತಾರಾಷ್ಟ್ರೀಯ ದೇಶೀಯ ವಿಮಾನ ಹಾರಾಟ ನಿಲ್ಲಿಸಲಾಗಿದೆ ಎಂದರೆ ಪರಿಸ್ಥಿತಿಯ ಗಂಭೀರತೆ ಅರ್ಥವಾಗಬೇಕು. ಜನ ಈ ಬಗ್ಗೆ ಉದಾಸೀನ ಮಾಡದೆ, ಅನಗತ್ಯವಾಗಿ ಕಾರಿನಲ್ಲಿ, ಸ್ವಂತ ವಾಹನದಲ್ಲಿ ಓಡಾಟ ಮಾಡಬಾರದು ಎಂದೂ ಸಿಎಂ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ನೂಕು ನುಗ್ಗಲು ಸಂಭವಿಸುವ ಆತಂಕ ಇರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು ತೆರೆಯದೇ ಇರಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.</p>.<p>ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ರಾಜ್ಯದ ಜನತೆ ಸರಳವಾಗಿ ತಮ್ಮ ಮನೆಯಲ್ಲೇ ಯುಗಾದಿ ಹಬ್ಬ ಆಚರಿಸಬೇಕು. ಇಂದಿರಾ ಕ್ಯಾಂಟಿನ್ ತೆರೆಯದಿರಲು ನಿರ್ಧಾರ ಮಾಡಿದ್ದೇವೆ. ಜನಸಂದಣಿ ಹೆಚ್ಚುವ ಭೀತಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ. ಜನ ಸರ್ಕಾರದ ಜತೆ ಸಹಕರಿಸಬೇಕು. ನಿಯಮ ಉಲ್ಲಂಘಿಸಿದರೆ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ. ಇದು ಅನಿವಾರ್ಯ,’ ಎಂದರು. </p>.<p>‘ಲಾಕ್ ಡೌನ್ಗೆ ನಾಗರಿಕರು ಸಹಕರಿಸುವ ಅಗತ್ಯವಿದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಮಾಡಿಕೊಡುತ್ತೇವೆ. ಜನರು ಆತಂಕಪಡುವ ಅವಶ್ಯಕತೆ ಇಲ್ಲ,’ ಎಂದು ಹೇಳಿದರು.</p>.<p>‘31ರವರೆಗೆ ಯಾರೂ ಮನೆಯಿಂದ ಹೊರ ಬರಬೇಡಿ. ಪೊಲೀಸರು ಕ್ರಮ ಕೈಗೊಂಡರೆ ಸರ್ಕಾರವನ್ನು ದೂಷಿಸಬೇಡಿ,’ ಎಂದು ಬಿಎಸ್ವೈ ಖಡಕ್ ಎಚ್ಚರಿಕೆ ನೀಡಿದ್ದಾರೆ.</p>.<p>ಹಾಲು ಮತ್ತು ದಿನಸಿ ಪದಾರ್ಥ ದರ ಹೆಚ್ಚಳ ಮಾಡಿ ಶೋಷಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನೂ ಅವರು ನೀಡಿದರು.</p>.<p>ಅಂತಾರಾಷ್ಟ್ರೀಯ ದೇಶೀಯ ವಿಮಾನ ಹಾರಾಟ ನಿಲ್ಲಿಸಲಾಗಿದೆ ಎಂದರೆ ಪರಿಸ್ಥಿತಿಯ ಗಂಭೀರತೆ ಅರ್ಥವಾಗಬೇಕು. ಜನ ಈ ಬಗ್ಗೆ ಉದಾಸೀನ ಮಾಡದೆ, ಅನಗತ್ಯವಾಗಿ ಕಾರಿನಲ್ಲಿ, ಸ್ವಂತ ವಾಹನದಲ್ಲಿ ಓಡಾಟ ಮಾಡಬಾರದು ಎಂದೂ ಸಿಎಂ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>