ಈ ಸಂಬಂಧ ರಾಜ್ಯ ಸರ್ಕಾರ ಅಭಿಜಿತ್ ಬ್ಯಾನರ್ಜಿ ಮತ್ತು ಡಫ್ಲೊ ಸೇರಿ ಆರಂಭಿಸಿರುವ ಅಬ್ದುಲ್ ಲತೀಫ್ ಜಮೀಲ್ ಪವರ್ಟಿ ಆ್ಯಕ್ಷನ್ ಲ್ಯಾಬ್ (ಜೆ–ಪಾಲ್) ಸಂಸ್ಥೆಯನ್ನು ಸಂಪರ್ಕಿಸಿದ್ದು, ಇದಕ್ಕೆ ಸಂಸ್ಥೆಯು ಒಪ್ಪಿಗೆ ನೀಡಿದೆ. ಇವರಿಬ್ಬರ ಜತೆಗೆ ಶಿಕಾಗೋ ಬೂತ್ನ ಸೆಂತಿಥಿ ಮುಲೈನಾಥನ್ ಅವರೂ ಐದು ಗ್ಯಾರಂಟಿಗಳ ಬಗ್ಗೆ ಅಧ್ಯಯನ ನಡೆಸಲು ಆಸಕ್ತಿ ತೋರಿಸಿದ್ದಾರೆ.