ಯಶವಂತಪುರ: ಬೆಂಗಳೂರು ದಕ್ಷಿಣ ತಾಲ್ಲೂಕು ಕೆ.ಗೊಲ್ಲಹಳ್ಳಿ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸಲ್ಲಿಕೆಯಾಗಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಯಿತು.
27 ಸದಸ್ಯರನ್ನು ಹೊಂದಿರುವ ಪಂಚಾಯಿತಿಯಲ್ಲಿ 20 ಸದಸ್ಯರು ಅಧ್ಯಕ್ಷ ಆರ್.ಮುನಿರಾಜು ಅವರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿ ಮೇ 18ರಂದು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.
ಗುರುವಾರ ಅವಿಶ್ವಾಸ ನಿರ್ಣಯ ಸಭೆ ನಿಗದಿ ಪಡಿಸಲಾಗಿತ್ತು. ಸಭೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಮುನಿರಾಜು ಅವರೊಬ್ಬರೇ ಹಾಜರಾಗಿದ್ದರು. ಕೋರಂ ಕೊರತೆ ಹಿನ್ನೆಲೆಯಲ್ಲಿ, ಬೆಂಗಳೂರು ದಕ್ಷಿಣ ಉಪವಿಭಾಗ ದಂಡಾಧಿಕಾರಿ ಹರೀಶ್ ನಾಯಕ್ ಸಭೆ ನಡೆಸಿ ಅವಿಶ್ವಾಸ ನಿರ್ಣಯದ ಸಭೆ ಮುಕ್ತಾಯಗೊಳಿಸಿದರು.