<p><strong>ಸುವರ್ಣ ವಿಧಾನಸೌಧ(ಬೆಳಗಾವಿ):</strong> ಉತ್ತರಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸರ್ಕಾರ ರಚಿಸಿದ್ದ ಪ್ರೊ.ಗೋವಿಂದರಾವ್ ಅವರ ಉನ್ನತಾಧಿಕಾರ ಸಮಿತಿ ವರದಿ ಕೊಟ್ಟ ತಕ್ಷಣವೇ ಅದನ್ನು ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಕಳೆದ ನಾಲ್ಕು ದಿನಗಳಿಂದ ವಿಧಾನಸಭೆಯಲ್ಲಿ ನಡೆದ ಉತ್ತರ ಕರ್ನಾಟಕದ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಅವರು ಉತ್ತರ ನೀಡಿದರು.</p>.<p>‘ಸರ್ಕಾರ ದಿವಾಳಿಯಾಗಿದ್ದು ಕಾಟಾಚಾರಕ್ಕೆ ಅಧಿವೇಶನ ನಡೆಸಿದ್ದೀರಿ. ಶಾಸಕರ ಬೇಡಿಕೆಗಳಿಗೆ ಸ್ಪಂದಿಸಿಲ್ಲ’ ಎಂದು ದೂರಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ತಮ್ಮ ಸದಸ್ಯರ ಜತೆಗ ಸಭಾತ್ಯಾಗ ಮಾಡಿದರು.</p>.<p>ಬಳಿಕ ಸುದೀರ್ಘ ಉತ್ತರ ನೀಡಿದ ಸಿದ್ದರಾಮಯ್ಯ, ಸರ್ಕಾರ ನೀಡಿದ ಕೊಡುಗೆಗಳನ್ನು ವಿವರಿಸಿದರಲ್ಲದೇ, ಕೆಲವು ಭರವಸೆಗಳನ್ನೂ ನೀಡಿದರು.</p>.<p>‘ನಂಜುಂಡಪ್ಪ ವರದಿಯ ಪ್ರಕಾರ 2007–09 ರಿಂದ 2023–24 ರವರೆಗೆ ₹35 ಸಾವಿರ ಕೋಟಿಗೂ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ. ಅದರಲ್ಲಿ, ಉತ್ತರ ಕರ್ನಾಟಕದ 14 ಜಿಲ್ಲೆಗಳಿಗೆ ₹17,500 ಕೋಟಿ ವೆಚ್ಚ ಮಾಡಲಾಗಿದೆ. ಆದರೆ ನಿರೀಕ್ಷಿತ ಪ್ರಮಾಣದ ಪ್ರಗತಿ ಆಗಿಲ್ಲವೆಂದು ಬಹುಪಾಲು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ, ಹಿಂದಿನ ವರ್ಷ ಬೆಳಗಾವಿ ಅಧಿವೇಶನದಲ್ಲಿ ಉನ್ನತಾಧಿಕಾರ ಸಮಿತಿ ರಚಿಸುವುದಾಗಿ ಘೋಷಿಸಿದ್ದೆವು. ಅದೇ ಪ್ರಕಾರ ನಾವು ಸಮಿತಿ ರಚಿಸಿದ್ದೇವೆ’ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.</p>.<p>‘ಆಲಮಟ್ಟಿ ಜಲಾಯಶಯದ ಎತ್ತರವನ್ನು 519 ಮೀಟರ್ಗಳಿಂದ 546.256 ಮೀಟರ್ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಮುಳುಗಡೆಯಾಗುವ ಸುಮಾರು 73 ಸಾವಿರ ಎಕರೆ ಭೂಮಿಯನ್ನು ಕನ್ಸೆಂಟ್ ಅವಾರ್ಡಿನ ಮೂಲಕ ಒಂದೇ ಹಂತದಲ್ಲಿ ರೈತರ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>‘ಈ ಭಾಗದಲ್ಲಿ ಮಳೆ ಮುಂತಾದ ಕಾರಣಗಳಿಂದ ಹಾನಿಯಾಗಿರುವ ರಸ್ತೆ ಅಭಿವೃದ್ದಿ ಕುರಿತು ಆದ್ಯತೆ ಮೇರೆಗೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಈ ಭಾಗದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಅವರು ವಾಗ್ದಾನ ಮಾಡಿದರು.</p>.<p>‘ಮಹದಾಯಿ ಯೋಜನೆಯನ್ನು ನಾವು ಶೀಘ್ರವಾಗಿ ಅನುಷ್ಠಾನ ಮಾಡಲು ಉದ್ದೇಶಿಸಿದ್ದೇವೆ. ಆದರೆ, ಕೇಂದ್ರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಈ ಯೋಜನೆಗೆ ಒಪ್ಪಿಗೆ ನೀಡದೇ ಸತಾಯಿಸುತ್ತಿದೆ. ಆದ್ದರಿಂದ,ಕೇಂದ್ರ ಸರ್ಕಾರವು ಈ ಕೂಡಲೇ ಒಪ್ಪಿ ನೀಡಬೇಕೆಂದು ಈ ಸದನದ ಪರವಾಗಿ ಒತ್ತಾಯಿಸುತ್ತೇನೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ(ಬೆಳಗಾವಿ):</strong> ಉತ್ತರಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸರ್ಕಾರ ರಚಿಸಿದ್ದ ಪ್ರೊ.ಗೋವಿಂದರಾವ್ ಅವರ ಉನ್ನತಾಧಿಕಾರ ಸಮಿತಿ ವರದಿ ಕೊಟ್ಟ ತಕ್ಷಣವೇ ಅದನ್ನು ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಕಳೆದ ನಾಲ್ಕು ದಿನಗಳಿಂದ ವಿಧಾನಸಭೆಯಲ್ಲಿ ನಡೆದ ಉತ್ತರ ಕರ್ನಾಟಕದ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಅವರು ಉತ್ತರ ನೀಡಿದರು.</p>.<p>‘ಸರ್ಕಾರ ದಿವಾಳಿಯಾಗಿದ್ದು ಕಾಟಾಚಾರಕ್ಕೆ ಅಧಿವೇಶನ ನಡೆಸಿದ್ದೀರಿ. ಶಾಸಕರ ಬೇಡಿಕೆಗಳಿಗೆ ಸ್ಪಂದಿಸಿಲ್ಲ’ ಎಂದು ದೂರಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ತಮ್ಮ ಸದಸ್ಯರ ಜತೆಗ ಸಭಾತ್ಯಾಗ ಮಾಡಿದರು.</p>.<p>ಬಳಿಕ ಸುದೀರ್ಘ ಉತ್ತರ ನೀಡಿದ ಸಿದ್ದರಾಮಯ್ಯ, ಸರ್ಕಾರ ನೀಡಿದ ಕೊಡುಗೆಗಳನ್ನು ವಿವರಿಸಿದರಲ್ಲದೇ, ಕೆಲವು ಭರವಸೆಗಳನ್ನೂ ನೀಡಿದರು.</p>.<p>‘ನಂಜುಂಡಪ್ಪ ವರದಿಯ ಪ್ರಕಾರ 2007–09 ರಿಂದ 2023–24 ರವರೆಗೆ ₹35 ಸಾವಿರ ಕೋಟಿಗೂ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ. ಅದರಲ್ಲಿ, ಉತ್ತರ ಕರ್ನಾಟಕದ 14 ಜಿಲ್ಲೆಗಳಿಗೆ ₹17,500 ಕೋಟಿ ವೆಚ್ಚ ಮಾಡಲಾಗಿದೆ. ಆದರೆ ನಿರೀಕ್ಷಿತ ಪ್ರಮಾಣದ ಪ್ರಗತಿ ಆಗಿಲ್ಲವೆಂದು ಬಹುಪಾಲು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ, ಹಿಂದಿನ ವರ್ಷ ಬೆಳಗಾವಿ ಅಧಿವೇಶನದಲ್ಲಿ ಉನ್ನತಾಧಿಕಾರ ಸಮಿತಿ ರಚಿಸುವುದಾಗಿ ಘೋಷಿಸಿದ್ದೆವು. ಅದೇ ಪ್ರಕಾರ ನಾವು ಸಮಿತಿ ರಚಿಸಿದ್ದೇವೆ’ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.</p>.<p>‘ಆಲಮಟ್ಟಿ ಜಲಾಯಶಯದ ಎತ್ತರವನ್ನು 519 ಮೀಟರ್ಗಳಿಂದ 546.256 ಮೀಟರ್ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಮುಳುಗಡೆಯಾಗುವ ಸುಮಾರು 73 ಸಾವಿರ ಎಕರೆ ಭೂಮಿಯನ್ನು ಕನ್ಸೆಂಟ್ ಅವಾರ್ಡಿನ ಮೂಲಕ ಒಂದೇ ಹಂತದಲ್ಲಿ ರೈತರ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>‘ಈ ಭಾಗದಲ್ಲಿ ಮಳೆ ಮುಂತಾದ ಕಾರಣಗಳಿಂದ ಹಾನಿಯಾಗಿರುವ ರಸ್ತೆ ಅಭಿವೃದ್ದಿ ಕುರಿತು ಆದ್ಯತೆ ಮೇರೆಗೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಈ ಭಾಗದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಅವರು ವಾಗ್ದಾನ ಮಾಡಿದರು.</p>.<p>‘ಮಹದಾಯಿ ಯೋಜನೆಯನ್ನು ನಾವು ಶೀಘ್ರವಾಗಿ ಅನುಷ್ಠಾನ ಮಾಡಲು ಉದ್ದೇಶಿಸಿದ್ದೇವೆ. ಆದರೆ, ಕೇಂದ್ರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಈ ಯೋಜನೆಗೆ ಒಪ್ಪಿಗೆ ನೀಡದೇ ಸತಾಯಿಸುತ್ತಿದೆ. ಆದ್ದರಿಂದ,ಕೇಂದ್ರ ಸರ್ಕಾರವು ಈ ಕೂಡಲೇ ಒಪ್ಪಿ ನೀಡಬೇಕೆಂದು ಈ ಸದನದ ಪರವಾಗಿ ಒತ್ತಾಯಿಸುತ್ತೇನೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>