ಸಕಲೇಶಪುರದ ದೋಣಿಗಲ್ ಬಳಿ ಮಂಗಳೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ‘ರಾಜ್ಯ ಸಾರಿಗೆ ಸಂಸ್ಥೆ, ಖಾಸಗಿ ಬಸ್ಗಳು, ಕಾರು ಸೇರಿದಂತೆ ಲಘು ವಾಹನಗಳು ಹಾಸನದಿಂದ ಅರಕಲಗೂಡು– ಕುಶಾಲನಗರ–ಸಂಪಾಜೆ ಮಾರ್ಗ ವಾಗಿ ಅಥವಾ ಹಾಸನ–ಬೇಲೂರು–ಮೂಡಿಗೆರೆ –ಚಾರ್ಮಾಡಿ ಘಾಟಿ ಮೂಲಕ ಮಂಗಳೂರಿಗೆ ಸಂಚರಿಸಬೇಕು’ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.