<p><strong>ಹುಬ್ಬಳ್ಳಿ/ಹಾವೇರಿ/ದಾಂಡೇಲಿ/ಮಾನ್ವಿ/ಶಹಬಾದ್:</strong> ಉತ್ತರ ಕರ್ನಾಟಕದ ವಿವಿಧೆಡೆ ಗುರುವಾರ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಬಾಗಲಕೋಟೆ ಜಿಲ್ಲೆಯ ಲೋಕಾಪುರ ಸಮೀಪದ ಜಾಲಿಕಟ್ಟಿ ಕೆ.ಡಿ.ಗ್ರಾಮದ ಸಹೋದರ ಸಂಬಂಧಿಗಳಾದ ಪ್ರಮೋದ ಮಹಾಂತೇಶ ಬಡಿಗೇರ (18), ಮನೋಜ ಮಂಜುನಾಥ ಬಡಿಗೇರ (18) ಮೃತಪಟ್ಟಿದ್ದಾರೆ.</p>.<p>‘ಗಣಿಗಾರಿಕೆ ವೇಳೆ ತೋಡಲಾಗಿದ್ದ ಆಳವಾದ ತಗ್ಗಿನಲ್ಲಿ ನೀರು ಶೇಖರಣೆ ಆಗಿತ್ತು. ಅದರ ಬದಿಯಲ್ಲಿ ನಿಂತು ಸ್ನಾನ ಮಾಡುತ್ತಿದ್ದ ವೇಳೆ ತಗ್ಗಿನಲ್ಲಿ ಜಾರಿ ಬಿದ್ದು ಮೃತಪಟ್ಟಿದ್ದಾರೆ’ ಎಂದು ಲೋಕಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ಹಾವೇರಿ ತಾಲ್ಲೂಕಿನ ಮಣ್ಣೂರು ಗ್ರಾಮದ ಬಳಿ ವರದಾ ನದಿಯಲ್ಲಿ ಮುಳುಗಿ ಬಸವರಾಜ ಅಂಗಡಿ (22) ಎಂಬುವರು ಮೃತಪಟ್ಟಿದ್ದಾರೆ. ಎತ್ತುಗಳ ಮೈತೊಳೆಯಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಗುತ್ತಲ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಮೌಳಂಗಿ ಸಮೀಪದ ಕಾಳಿ ನದಿಯ ಸಂಗಮ ಪ್ರದೇಶದಲ್ಲಿ ಗೆಳೆಯರೊಂದಿಗೆ ಸ್ನಾನಕ್ಕೆ ತೆರಳಿದ್ದ ನವಾಝ್ ನಾಯ್ಕ (18) ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಗುರುವಾರ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲಾಗಿದ್ದಾರೆ.</p>.<p>ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ ರೆಡ್ಡಿ ರಾಜಲದಿನ್ನಿ (28) ಎಂದು ಗುರುತಿಸಲಾಗಿದೆ. ವಂಶಿ ರೆಡ್ಡಿ ಅವರು ಸ್ನಾನಕ್ಕಾಗಿ ನೀರಿಗೆ ಇಳಿದಾಗ ಮುಳುಗಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದರು. </p>.<p><strong>ವಿದ್ಯಾರ್ಥಿ ಸಾವು: </strong>ಕಲಬುರಗಿ ಜಿಲ್ಲೆಯ ಶಹಾಬಾದ್ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕಾಗಿಣಾ ನದಿಯಲ್ಲಿ ಈಜಲು ಹೋದ ಹನುಮಾನ ನಗರದ ನಿವಾಸಿ ವೆಂಕಟೇಶ (16) ಮೃತಪಟ್ಟಿದ್ದಾನೆ. </p>.<p>ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ ಬಾಲಕನ ಮೃತದೇಹವನ್ನು ಶಹಾಬಾದ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಅವರ ತಂದೆ–ತಾಯಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ/ಹಾವೇರಿ/ದಾಂಡೇಲಿ/ಮಾನ್ವಿ/ಶಹಬಾದ್:</strong> ಉತ್ತರ ಕರ್ನಾಟಕದ ವಿವಿಧೆಡೆ ಗುರುವಾರ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಬಾಗಲಕೋಟೆ ಜಿಲ್ಲೆಯ ಲೋಕಾಪುರ ಸಮೀಪದ ಜಾಲಿಕಟ್ಟಿ ಕೆ.ಡಿ.ಗ್ರಾಮದ ಸಹೋದರ ಸಂಬಂಧಿಗಳಾದ ಪ್ರಮೋದ ಮಹಾಂತೇಶ ಬಡಿಗೇರ (18), ಮನೋಜ ಮಂಜುನಾಥ ಬಡಿಗೇರ (18) ಮೃತಪಟ್ಟಿದ್ದಾರೆ.</p>.<p>‘ಗಣಿಗಾರಿಕೆ ವೇಳೆ ತೋಡಲಾಗಿದ್ದ ಆಳವಾದ ತಗ್ಗಿನಲ್ಲಿ ನೀರು ಶೇಖರಣೆ ಆಗಿತ್ತು. ಅದರ ಬದಿಯಲ್ಲಿ ನಿಂತು ಸ್ನಾನ ಮಾಡುತ್ತಿದ್ದ ವೇಳೆ ತಗ್ಗಿನಲ್ಲಿ ಜಾರಿ ಬಿದ್ದು ಮೃತಪಟ್ಟಿದ್ದಾರೆ’ ಎಂದು ಲೋಕಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ಹಾವೇರಿ ತಾಲ್ಲೂಕಿನ ಮಣ್ಣೂರು ಗ್ರಾಮದ ಬಳಿ ವರದಾ ನದಿಯಲ್ಲಿ ಮುಳುಗಿ ಬಸವರಾಜ ಅಂಗಡಿ (22) ಎಂಬುವರು ಮೃತಪಟ್ಟಿದ್ದಾರೆ. ಎತ್ತುಗಳ ಮೈತೊಳೆಯಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಗುತ್ತಲ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಮೌಳಂಗಿ ಸಮೀಪದ ಕಾಳಿ ನದಿಯ ಸಂಗಮ ಪ್ರದೇಶದಲ್ಲಿ ಗೆಳೆಯರೊಂದಿಗೆ ಸ್ನಾನಕ್ಕೆ ತೆರಳಿದ್ದ ನವಾಝ್ ನಾಯ್ಕ (18) ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಗುರುವಾರ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲಾಗಿದ್ದಾರೆ.</p>.<p>ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ ರೆಡ್ಡಿ ರಾಜಲದಿನ್ನಿ (28) ಎಂದು ಗುರುತಿಸಲಾಗಿದೆ. ವಂಶಿ ರೆಡ್ಡಿ ಅವರು ಸ್ನಾನಕ್ಕಾಗಿ ನೀರಿಗೆ ಇಳಿದಾಗ ಮುಳುಗಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದರು. </p>.<p><strong>ವಿದ್ಯಾರ್ಥಿ ಸಾವು: </strong>ಕಲಬುರಗಿ ಜಿಲ್ಲೆಯ ಶಹಾಬಾದ್ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕಾಗಿಣಾ ನದಿಯಲ್ಲಿ ಈಜಲು ಹೋದ ಹನುಮಾನ ನಗರದ ನಿವಾಸಿ ವೆಂಕಟೇಶ (16) ಮೃತಪಟ್ಟಿದ್ದಾನೆ. </p>.<p>ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ ಬಾಲಕನ ಮೃತದೇಹವನ್ನು ಶಹಾಬಾದ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಅವರ ತಂದೆ–ತಾಯಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>