<p><strong>ಬೆಂಗಳೂರು</strong>: ‘ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಎಂದು ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಅಸಮಂಜಸ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿಲ್ಲ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>‘ಕಾಗೆ ಅವರಿಗೆ ಅಸಮಾಧಾನ ಇರಬಹುದು. ಆದರೆ ನಮ್ಮ ಸರ್ಕಾರ ಪ್ರಾದೇಶಿಕ ಅಸಮತೋಲನ ನಿವಾರಿಸಲು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದೆ’ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ವಾರಗಳ ಹಿಂದಷ್ಟೇ ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಯೋಜನೆಗೆ ₹50 ಸಾವಿರ ಕೋಟಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇದು ಮುಖ್ಯಮಂತ್ರಿಯವರಿಗೆ ನಮ್ಮ ಭಾಗದ ಕುರಿತು ಇರುವ ಕಾಳಜಿಯನ್ನು ತೋರಿಸುತ್ತದೆ’ ಎಂದರು.</p>.<p>‘ಅಖಂಡ ಕರ್ನಾಟಕಕ್ಕಾಗಿ ಉತ್ತರ ಕರ್ನಾಟಕದ ಭಾಗವೂ ಸೇರಿ ಎಲ್ಲ ಭಾಗದ ಜನರು ಹೋರಾಟ ಮಾಡಿದ್ದರ ಪರಿಣಾಮ ಕರ್ನಾಟಕ ರಾಜ್ಯ ಜನ್ಮ ತಳೆಯಿತು. ಅವರ ತ್ಯಾಗವನ್ನು ವ್ಯರ್ಥ ಮಾಡಬಾರದು’ ಎಂದು ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಎಂದು ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಅಸಮಂಜಸ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿಲ್ಲ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.</p>.<p>‘ಕಾಗೆ ಅವರಿಗೆ ಅಸಮಾಧಾನ ಇರಬಹುದು. ಆದರೆ ನಮ್ಮ ಸರ್ಕಾರ ಪ್ರಾದೇಶಿಕ ಅಸಮತೋಲನ ನಿವಾರಿಸಲು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದೆ’ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ವಾರಗಳ ಹಿಂದಷ್ಟೇ ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಯೋಜನೆಗೆ ₹50 ಸಾವಿರ ಕೋಟಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇದು ಮುಖ್ಯಮಂತ್ರಿಯವರಿಗೆ ನಮ್ಮ ಭಾಗದ ಕುರಿತು ಇರುವ ಕಾಳಜಿಯನ್ನು ತೋರಿಸುತ್ತದೆ’ ಎಂದರು.</p>.<p>‘ಅಖಂಡ ಕರ್ನಾಟಕಕ್ಕಾಗಿ ಉತ್ತರ ಕರ್ನಾಟಕದ ಭಾಗವೂ ಸೇರಿ ಎಲ್ಲ ಭಾಗದ ಜನರು ಹೋರಾಟ ಮಾಡಿದ್ದರ ಪರಿಣಾಮ ಕರ್ನಾಟಕ ರಾಜ್ಯ ಜನ್ಮ ತಳೆಯಿತು. ಅವರ ತ್ಯಾಗವನ್ನು ವ್ಯರ್ಥ ಮಾಡಬಾರದು’ ಎಂದು ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>