ನಾವು ಈಗಾಗಲೇ ನಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆ ಅಂಗೀಕರಿಸಲು ಸೂಚಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಲಾಗಿತ್ತು. ಇದೀಗ ನಮ್ಮನ್ನು ಅನರ್ಹಗೊಳಿಸುವ ಕುರಿತು ಪತ್ರ ಬರೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ, ನಮ್ಮ ಪಕ್ಷದಿಂದ ಯಾವುದೇ ನೋಟೀಸ್ ಬಂದಿಲ್ಲ. ಹೀಗಾಗಿ, ನಮಗೆ ಸಮಯಾವಾಕಾಶ ನೀಡುವಂತೆ ಸ್ಪೀಕರ್ಗೆ ಬರೆದಿರುವ ಪತ್ರದಲ್ಲಿ ಅತೃಪ್ತರು ಮನವಿ ಮಾಡಿದ್ದಾರೆ.