<p><strong>ಬೆಂಗಳೂರು</strong>: ‘ನಮ್ಮಲ್ಲಿ ಎಲ್ಲವೂ ಸರಿ ಇಲ್ಲ. ಆಂತರಿಕ ವ್ಯತ್ಯಾಸ ಒಳಗೊಳಗೇ ಕುದಿಯುತ್ತಿದೆ. ಎಲ್ಲ ಸರಿ ಇದೆ ಎಂದು ಕಂಡರೂ, ಬೂದಿ ಮುಚ್ಚಿದ ಕೆಂಡದ ಸ್ಥಿತಿ ಇದೆ’ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.</p><p>ಸುದ್ದಿಗಾರ ಜತೆ ಮಾತನಾಡಿದ ಅವರು, ‘ಯಾರನ್ನಾದರೂ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿ. ಆದರೆ ಸಂಘಟನಾ ವೇಗಕ್ಕೆ ತಡೆ ಮಾಡಬಾರದು. ಇದರಿಂದ ಪಕ್ಷಕ್ಕೆ ಭಾರಿ ಹಿನ್ನಡೆ ಆಗುತ್ತದೆ’ ಎಂದರು.</p><p>‘ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಲು ಸಿದ್ಧರಾಗಿದ್ದಾರೆ. ಈ ಬಗ್ಗೆ ಒಬ್ಬೊಬ್ಬರು ಒಂದು ರೀತಿಯ ಹೇಳಿಕೆ ನೀಡದಂತೆ ವರಿಷ್ಠರು ಕಡಿವಾಣ ಹಾಕಬೇಕಾಗಿದೆ’ ಎಂದು ಹೇಳಿದರು.</p><p>‘ನಮ್ಮಲ್ಲಿ ಪ್ರಮುಖ ನಾಯಕರ ಸಮಿತಿ ಇದೆ. ಅದು ಸಂಪ್ರದಾಯದಂತೆ ಸಭೆ ಸೇರುತ್ತದೆ. ಆದರೆ, ಅಲ್ಲಿ ವಿಷಯಾಧಾರಿತ ಚರ್ಚೆ ನಡೆಯುತ್ತಿಲ್ಲ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ನಾಯಕರ ಸಮಿತಿ ಸದಸ್ಯರು, ಪಕ್ಷ ಕಟ್ಟಿ ಬೆಳೆಸಿದ ಪ್ರಮುಖರ ಜತೆ ಚರ್ಚಿಸಿ ತೀರ್ಮಾನ ತೆಗೆದು<br>ಕೊಳ್ಳುವ ಕೆಲಸ ಆಗುತ್ತಿಲ್ಲ’ ಎಂದರು.</p><p>‘ಪಕ್ಷದಲ್ಲಿ ಶುದ್ಧೀಕರಣ ಆರಂಭವಾಗಿದೆ. ಈ ಕೆಲಸ ಕೇವಲ ಪ್ರೋಕ್ಷಣೆಯಿಂದ ಆಗುವುದಿಲ್ಲ. ಅದೂ ಕೂಡ ಒಳ್ಳೆಯ ರೀತಿಯಲ್ಲಿ ಆಗಬೇಕು. ಕೆಲವರನ್ನು ಹೊರಗೆ ಹಾಕುವ ಮೂಲಕ ಶುದ್ಧೀಕರಣ ಆರಂಭವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಮ್ಮಲ್ಲಿ ಎಲ್ಲವೂ ಸರಿ ಇಲ್ಲ. ಆಂತರಿಕ ವ್ಯತ್ಯಾಸ ಒಳಗೊಳಗೇ ಕುದಿಯುತ್ತಿದೆ. ಎಲ್ಲ ಸರಿ ಇದೆ ಎಂದು ಕಂಡರೂ, ಬೂದಿ ಮುಚ್ಚಿದ ಕೆಂಡದ ಸ್ಥಿತಿ ಇದೆ’ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.</p><p>ಸುದ್ದಿಗಾರ ಜತೆ ಮಾತನಾಡಿದ ಅವರು, ‘ಯಾರನ್ನಾದರೂ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿ. ಆದರೆ ಸಂಘಟನಾ ವೇಗಕ್ಕೆ ತಡೆ ಮಾಡಬಾರದು. ಇದರಿಂದ ಪಕ್ಷಕ್ಕೆ ಭಾರಿ ಹಿನ್ನಡೆ ಆಗುತ್ತದೆ’ ಎಂದರು.</p><p>‘ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಲು ಸಿದ್ಧರಾಗಿದ್ದಾರೆ. ಈ ಬಗ್ಗೆ ಒಬ್ಬೊಬ್ಬರು ಒಂದು ರೀತಿಯ ಹೇಳಿಕೆ ನೀಡದಂತೆ ವರಿಷ್ಠರು ಕಡಿವಾಣ ಹಾಕಬೇಕಾಗಿದೆ’ ಎಂದು ಹೇಳಿದರು.</p><p>‘ನಮ್ಮಲ್ಲಿ ಪ್ರಮುಖ ನಾಯಕರ ಸಮಿತಿ ಇದೆ. ಅದು ಸಂಪ್ರದಾಯದಂತೆ ಸಭೆ ಸೇರುತ್ತದೆ. ಆದರೆ, ಅಲ್ಲಿ ವಿಷಯಾಧಾರಿತ ಚರ್ಚೆ ನಡೆಯುತ್ತಿಲ್ಲ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ನಾಯಕರ ಸಮಿತಿ ಸದಸ್ಯರು, ಪಕ್ಷ ಕಟ್ಟಿ ಬೆಳೆಸಿದ ಪ್ರಮುಖರ ಜತೆ ಚರ್ಚಿಸಿ ತೀರ್ಮಾನ ತೆಗೆದು<br>ಕೊಳ್ಳುವ ಕೆಲಸ ಆಗುತ್ತಿಲ್ಲ’ ಎಂದರು.</p><p>‘ಪಕ್ಷದಲ್ಲಿ ಶುದ್ಧೀಕರಣ ಆರಂಭವಾಗಿದೆ. ಈ ಕೆಲಸ ಕೇವಲ ಪ್ರೋಕ್ಷಣೆಯಿಂದ ಆಗುವುದಿಲ್ಲ. ಅದೂ ಕೂಡ ಒಳ್ಳೆಯ ರೀತಿಯಲ್ಲಿ ಆಗಬೇಕು. ಕೆಲವರನ್ನು ಹೊರಗೆ ಹಾಕುವ ಮೂಲಕ ಶುದ್ಧೀಕರಣ ಆರಂಭವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>