ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಮೀಸಲಾತಿಯ ಅನ್ಯಾಯ ಸರಿಪಡಿಸಲಾಗುವುದು ಎಂದು ಚುನಾವಣೆ ಸಮಯದಲ್ಲಿ ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದ ನಂತರ ವರಸೆ ಬದಲಾಯಿಸಿದರು. ಅಧಿಕಾರಕ್ಕೆ ಬಂದ ಎಂಟು ತಿಂಗಳ ಬಳಿಕ, ಲೋಕಸಭಾ ಚುನಾವಣೆಯಲ್ಲಿ ಸಮುದಾಯಗಳ ದಾರಿ ತಪ್ಪಿಸಲು 341ನೇ ವಿಧಿ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ದೂರಿದರು.