<p><strong>ತುಮಕೂರು:</strong> ‘ಯಾರೇ ವಿರೋಧ ಮಾಡಿದರೂ ಎಸ್ಸೆಸ್ಸೆಲ್ಸಿ ಪಠ್ಯಪುಸ್ತಕದಲ್ಲಿ ಸೇರ್ಪಡೆಯಾಗಿರುವ ಕೇಶವ ಬಲಿರಾಮ್ ಹೆಡಗೇವಾರ್ ಭಾಷಣ ಹಿಂಪಡೆಯುವುದಿಲ್ಲ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೆಡಗೇವಾರ್ ಕೋಟ್ಯಂತರ ಯುವಕರಿಗೆ ಪ್ರೇರಣೆಯಾಗಿದ್ದರು. ವೈಯಕ್ತಿಕ ಜೀವನಕ್ಕಿಂತ ಸಮಾಜದ ಅಭಿವೃದ್ಧಿಗೆ ಶ್ರಮಿಸಿದವರು. ಸ್ವಾತಂತ್ರ್ಯಕ್ಕಾಗಿ ಅವರು ಹೋರಾಟ ಮಾಡಿದರು. ಜೈಲಿಗೂ ಹೋಗಿದ್ದರು. ಅಂದಿನ ಜಾತಿ, ಅಸ್ಪೃಶ್ಯತೆಯಂತಹ ದೊಡ್ಡ ಸಮಸ್ಯೆಗಳಿಗೆ ಪರಿಹಾರ ಹುಡುಕಿದ್ದರು’ ಎಂದು ಅಭಿಪ್ರಾಯಪಟ್ಟರು.</p>.<p>‘ಆರ್ಎಸ್ಎಸ್ನಂತಹ ಒಂದು ದೊಡ್ಡ ಸಂಘಟನೆಯನ್ನು ಹೆಡಗೇವಾರ್ ಕಟ್ಟಿದರು. ಅವರ ಒಂದು ಭಾಷಣ ವಿರೋಧಿಸುತ್ತಾರೆ ಎಂದರೆ ಇವರುಎಂತಹ ಸಂಕುಚಿತ ಮನಸ್ಸಿನವರು ಎಂಬುದು ಅರ್ಥವಾಗುತ್ತದೆ. ಪಠ್ಯದಲ್ಲಿ ಏನಾದರೂ ತಪ್ಪಿದ್ದರೆ ಅದನ್ನು ವಿರೋಧಿಸಲಿ. ಅದನ್ನು ನಾನು ಸ್ವಾಗತಿಸುತ್ತೇನೆ.ಹೆಡಗೇವಾರ್ ವಿಚಾರವನ್ನು ಎಲ್ಲರೂ ತಿಳಿದುಕೊಂಡರೆ ಕಮ್ಯೂನಿಸ್ಟ್ ವಿಚಾರಗಳು ದೇಶದಿಂದ ಎಲ್ಲಿಗೆ ಹೋಗುತ್ತವೊ<br />ಎನ್ನುವ ಭಯ, ಹೆದರಿಕೆ ಕೆಲವರಲ್ಲಿ ಶುರುವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಯಾರೇ ವಿರೋಧ ಮಾಡಿದರೂ ಎಸ್ಸೆಸ್ಸೆಲ್ಸಿ ಪಠ್ಯಪುಸ್ತಕದಲ್ಲಿ ಸೇರ್ಪಡೆಯಾಗಿರುವ ಕೇಶವ ಬಲಿರಾಮ್ ಹೆಡಗೇವಾರ್ ಭಾಷಣ ಹಿಂಪಡೆಯುವುದಿಲ್ಲ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೆಡಗೇವಾರ್ ಕೋಟ್ಯಂತರ ಯುವಕರಿಗೆ ಪ್ರೇರಣೆಯಾಗಿದ್ದರು. ವೈಯಕ್ತಿಕ ಜೀವನಕ್ಕಿಂತ ಸಮಾಜದ ಅಭಿವೃದ್ಧಿಗೆ ಶ್ರಮಿಸಿದವರು. ಸ್ವಾತಂತ್ರ್ಯಕ್ಕಾಗಿ ಅವರು ಹೋರಾಟ ಮಾಡಿದರು. ಜೈಲಿಗೂ ಹೋಗಿದ್ದರು. ಅಂದಿನ ಜಾತಿ, ಅಸ್ಪೃಶ್ಯತೆಯಂತಹ ದೊಡ್ಡ ಸಮಸ್ಯೆಗಳಿಗೆ ಪರಿಹಾರ ಹುಡುಕಿದ್ದರು’ ಎಂದು ಅಭಿಪ್ರಾಯಪಟ್ಟರು.</p>.<p>‘ಆರ್ಎಸ್ಎಸ್ನಂತಹ ಒಂದು ದೊಡ್ಡ ಸಂಘಟನೆಯನ್ನು ಹೆಡಗೇವಾರ್ ಕಟ್ಟಿದರು. ಅವರ ಒಂದು ಭಾಷಣ ವಿರೋಧಿಸುತ್ತಾರೆ ಎಂದರೆ ಇವರುಎಂತಹ ಸಂಕುಚಿತ ಮನಸ್ಸಿನವರು ಎಂಬುದು ಅರ್ಥವಾಗುತ್ತದೆ. ಪಠ್ಯದಲ್ಲಿ ಏನಾದರೂ ತಪ್ಪಿದ್ದರೆ ಅದನ್ನು ವಿರೋಧಿಸಲಿ. ಅದನ್ನು ನಾನು ಸ್ವಾಗತಿಸುತ್ತೇನೆ.ಹೆಡಗೇವಾರ್ ವಿಚಾರವನ್ನು ಎಲ್ಲರೂ ತಿಳಿದುಕೊಂಡರೆ ಕಮ್ಯೂನಿಸ್ಟ್ ವಿಚಾರಗಳು ದೇಶದಿಂದ ಎಲ್ಲಿಗೆ ಹೋಗುತ್ತವೊ<br />ಎನ್ನುವ ಭಯ, ಹೆದರಿಕೆ ಕೆಲವರಲ್ಲಿ ಶುರುವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>