ಬೆಳಗಾವಿ ಜಿಲ್ಲಾ ಪ್ರವಾಸ ಮುಗಿಸಿ ಭಾನುವಾರ ಸಂಜೆ ಬೆಂಗಳೂರಿಗೆ ಹಿಂದಿರುಗಿದ ಬಳಿಕ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ʼಇವತ್ತು ರಾತ್ರಿ ಅಥವಾ ಸೋಮವಾರ ಬೆಳಿಗ್ಗೆ ಸಂದೇಶ ಬರಬಹುದು. ಸಂದೇಶ ಬಂದ ಬಳಿಕ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ. ಅಧಿಕಾರದಲ್ಲಿ ಮುಂದುವರಿಯಿರಿ ಎಂದರೆ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿಕೊಂಡು ಹೋಗುವೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಹುದ್ದೆಯಿಂದ ಕೆಳಗೆ ಇಳಿಯುತ್ತೇನೆʼ ಎಂದರು.