<p><strong>ಬೆಂಗಳೂರು</strong>: ‘ಆದಾಯ ತೆರಿಗೆ (ಐ.ಟಿ) ಇಲಾಖೆಯಿಂದ ಶುಕ್ರವಾರ ರಾತ್ರಿ ನನಗೂ ನೋಟಿಸ್ ಬಂದಿದೆ. ಅದೂ ಈಗಾಗಲೇ ಬಗೆಹರಿದ ವಿಚಾರಕ್ಕೆ ಬಂದಿದೆ. ಇದರಿಂದ ಆಘಾತವಾಗಿದೆ. ಕೇವಲ ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿ ನಾಯಕರ ಮೇಲೂ ತನಿಖೆ ನಡೆಯುತ್ತಿದೆ. ಆದರೆ, ಅವರನ್ನು ವಿಚಾರಣೆಗೆ ಕರೆಯುವುದಿಲ್ಲ’ ಎಂದು ಆರೋಪಿಸಿದರು.</p>.<p>‘ದೇಶದಲ್ಲಿ ಪ್ರಜಾಪ್ರಭುತ್ವ, ಕಾನೂನು ಇದೆ. ಅದನ್ನು ಹರಾಜು ಹಾಕುತ್ತಿದ್ದಾರೆ. ಅಧಿಕಾರಿಗಳಿಗೆ ಬಿಜೆಪಿ ಸರ್ಕಾರ ಇಂತಹ ಸೂಚನೆ ನೀಡುತ್ತಿದೆ. ಅಧಿಕಾರ ಸೇರಿ ಯಾವುದು ಶಾಶ್ವತವಲ್ಲ. ವಿರೋಧಪಕ್ಷಗಳನ್ನು ಏಕೆ ಗುರಿ ಮಾಡಲಾಗುತ್ತಿದೆ’ ಎಂದೂ ಪ್ರಶ್ನಿಸಿದರು.</p>.<p>‘ಇಂಡಿಯಾ’ ಮೈತ್ರಿಕೂಟವನ್ನು ಗುರಿ ಮಾಡಲಾಗಿದೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಎನ್ಡಿಎ ಮೈತ್ರಿಕೂಟ ಹತಾಶೆಯಾಗಿದೆ. ಎನ್ಡಿಎ ಸೋಲಿಸಲು ‘ಇಂಡಿಯಾ’ ಹೊರಟಿದೆ. ಹೀಗಾಗಿ, ಭಯ ಹುಟ್ಟಿಸಲು ಇಂತಹ ಯತ್ನಗಳು ನಡೆಯುತ್ತಿದೆ’ ಎಂದೂ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆದಾಯ ತೆರಿಗೆ (ಐ.ಟಿ) ಇಲಾಖೆಯಿಂದ ಶುಕ್ರವಾರ ರಾತ್ರಿ ನನಗೂ ನೋಟಿಸ್ ಬಂದಿದೆ. ಅದೂ ಈಗಾಗಲೇ ಬಗೆಹರಿದ ವಿಚಾರಕ್ಕೆ ಬಂದಿದೆ. ಇದರಿಂದ ಆಘಾತವಾಗಿದೆ. ಕೇವಲ ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿ ನಾಯಕರ ಮೇಲೂ ತನಿಖೆ ನಡೆಯುತ್ತಿದೆ. ಆದರೆ, ಅವರನ್ನು ವಿಚಾರಣೆಗೆ ಕರೆಯುವುದಿಲ್ಲ’ ಎಂದು ಆರೋಪಿಸಿದರು.</p>.<p>‘ದೇಶದಲ್ಲಿ ಪ್ರಜಾಪ್ರಭುತ್ವ, ಕಾನೂನು ಇದೆ. ಅದನ್ನು ಹರಾಜು ಹಾಕುತ್ತಿದ್ದಾರೆ. ಅಧಿಕಾರಿಗಳಿಗೆ ಬಿಜೆಪಿ ಸರ್ಕಾರ ಇಂತಹ ಸೂಚನೆ ನೀಡುತ್ತಿದೆ. ಅಧಿಕಾರ ಸೇರಿ ಯಾವುದು ಶಾಶ್ವತವಲ್ಲ. ವಿರೋಧಪಕ್ಷಗಳನ್ನು ಏಕೆ ಗುರಿ ಮಾಡಲಾಗುತ್ತಿದೆ’ ಎಂದೂ ಪ್ರಶ್ನಿಸಿದರು.</p>.<p>‘ಇಂಡಿಯಾ’ ಮೈತ್ರಿಕೂಟವನ್ನು ಗುರಿ ಮಾಡಲಾಗಿದೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಎನ್ಡಿಎ ಮೈತ್ರಿಕೂಟ ಹತಾಶೆಯಾಗಿದೆ. ಎನ್ಡಿಎ ಸೋಲಿಸಲು ‘ಇಂಡಿಯಾ’ ಹೊರಟಿದೆ. ಹೀಗಾಗಿ, ಭಯ ಹುಟ್ಟಿಸಲು ಇಂತಹ ಯತ್ನಗಳು ನಡೆಯುತ್ತಿದೆ’ ಎಂದೂ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>