<p><strong>ಬೆಂಗಳೂರು</strong>: ₹1,800 ಕೋಟಿ ಮೊತ್ತದಲ್ಲಿ ಆಂಬುಲೆನ್ಸ್ ನಿಯಂತ್ರಣಾ ಕೇಂದ್ರ ತೆರೆಯುವ ಟೆಂಡರ್ ಪ್ರಕ್ರಿಯೆ ರದ್ದು ಪಡಿಸಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿದೆ.</p>.<p>ಟೆಂಡರ್ ಪ್ರಕ್ರಿಯೆ ಮೇಲ್ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘2020ರ ಜನವರಿ 17ರಂದು ಟೆಂಡರ್ ಪ್ರಕ್ರಿಯೆ ರದ್ದುಪಡಿಸಲಾಗಿದೆ. ನ್ಯಾಯಾಲಯ ಇಡೀ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುತ್ತಿರುವಾಗ, ಅನುಮತಿ ಪಡೆಯದೇ ಏಕಾಏಕಿ ಸರ್ಕಾರ ರದ್ದುಗೊಳಿಸಬಹುದೇ’ ಎಂದು ಪ್ರಶ್ನಿಸಿತು.</p>.<p>‘ಸಚಿವರ ಬದಲು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರತಿವಾದಿಯಾಗಿ ಮಾಡಿಕೊಳ್ಳಬಹುದು’ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು. ‘ಟೆಂಡರ್ ಪ್ರಕ್ರಿಯೆ ರದ್ದುಗೊಳಿಸುವ ಆದೇಶದಲ್ಲಿ ಸಚಿವರ ಸಹಿ ಇದೆ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>ಸಚಿವರನ್ನು ಪ್ರತಿವಾದಿಯನ್ನಾಗಿಸಲು ಅನುಮತಿ ಕೋರಿ ಅರ್ಜಿದಾರರಾದ ಭಾರತ ಪುನರುತ್ತಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಗೂ ಅನುಮತಿ ನೀಡಿದಪೀಠ, ಮಾರ್ಚ್ 30ಕ್ಕೆ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ₹1,800 ಕೋಟಿ ಮೊತ್ತದಲ್ಲಿ ಆಂಬುಲೆನ್ಸ್ ನಿಯಂತ್ರಣಾ ಕೇಂದ್ರ ತೆರೆಯುವ ಟೆಂಡರ್ ಪ್ರಕ್ರಿಯೆ ರದ್ದು ಪಡಿಸಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿದೆ.</p>.<p>ಟೆಂಡರ್ ಪ್ರಕ್ರಿಯೆ ಮೇಲ್ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘2020ರ ಜನವರಿ 17ರಂದು ಟೆಂಡರ್ ಪ್ರಕ್ರಿಯೆ ರದ್ದುಪಡಿಸಲಾಗಿದೆ. ನ್ಯಾಯಾಲಯ ಇಡೀ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುತ್ತಿರುವಾಗ, ಅನುಮತಿ ಪಡೆಯದೇ ಏಕಾಏಕಿ ಸರ್ಕಾರ ರದ್ದುಗೊಳಿಸಬಹುದೇ’ ಎಂದು ಪ್ರಶ್ನಿಸಿತು.</p>.<p>‘ಸಚಿವರ ಬದಲು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರತಿವಾದಿಯಾಗಿ ಮಾಡಿಕೊಳ್ಳಬಹುದು’ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು. ‘ಟೆಂಡರ್ ಪ್ರಕ್ರಿಯೆ ರದ್ದುಗೊಳಿಸುವ ಆದೇಶದಲ್ಲಿ ಸಚಿವರ ಸಹಿ ಇದೆ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>ಸಚಿವರನ್ನು ಪ್ರತಿವಾದಿಯನ್ನಾಗಿಸಲು ಅನುಮತಿ ಕೋರಿ ಅರ್ಜಿದಾರರಾದ ಭಾರತ ಪುನರುತ್ತಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಗೂ ಅನುಮತಿ ನೀಡಿದಪೀಠ, ಮಾರ್ಚ್ 30ಕ್ಕೆ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>