‘ಕೇಂದ್ರ ಸಚಿವರೊಂದಿಗೆ ಚರ್ಚೆ’
‘ಮಹಿಳಾ ಕಾರ್ಮಿಕರು ಮಕ್ಕಳನ್ನು ‘ಕೂಸಿನ ಮನೆ’ಗಳಲ್ಲಿ ಬಿಟ್ಟು ನಿಶ್ಚಿಂತೆಯಿಂದ ನರೇಗಾದಲ್ಲಿ ದುಡಿದು ಕೂಲಿ ಪಡೆಯುತ್ತಿದ್ದಾರೆ. ಕೂಸಿನ ಮನೆಯ ಆರೈಕೆದಾರರೂ ನರೇಗಾ ಭಾಗವೇ ಆಗಿದ್ದಾರೆ. ಆದ್ದರಿಂದ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗುತ್ತಿತ್ತು. ಕೇಂದ್ರ ಸರ್ಕಾರದ ಈ ಆದೇಶ ಸರಿಯಿಲ್ಲ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿ ವಿನಾಯಿತಿ ನೀಡುವಂತೆ ಮನವಿ ಮಾಡಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ‘ಪ್ರಜಾವಾಣಿ’ಗೆ ತಿಳಿಸಿದರು.