<p><strong>ಬೆಂಗಳೂರು:</strong> ‘ನರೇಗಾ ಬಚಾವ್ ಸಂಗ್ರಾಮ್’ ಕಾರ್ಯಕ್ರಮದ ಆಯೋಜನೆ, ಬೂತ್ ಮಟ್ಟದ ಏಜೆಂಟರ ಪಟ್ಟಿ ತಯಾರಿ ಮತ್ತು ಸ್ಥಳಿಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯ ಕುರಿತು ಚರ್ಚಿಸಲು ಇದೇ 13ರಂದು ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಯಲಿದೆ.</p>.<p>‘ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳು, ಪಕ್ಷದ ಸಂಸದರು, ಶಾಸಕರು, ಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು, ಪರಾಜಿತ ಅಭ್ಯರ್ಥಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು ಸೇರಿದಂತೆ ಎಲ್ಲ ನಾಯಕರು ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.</p>.<p>‘ನರೇಗಾ ಕಾಯ್ದೆಗೆ ತಿದ್ದುಪಡಿ ತಂದು, ಅದರ ಹೆಸರು ಬದಲಿಸುವ ಜೊತೆಗೆ ಮೂಲ ಸ್ವರೂಪಕ್ಕೇ ಧಕ್ಕೆ ತಂದಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ದೇಶದಾದ್ಯಂತ ಪಕ್ಷ ಪ್ರತಿಭಟನೆ ಹಮ್ಮಿಕೊಳ್ಳಲಿದೆ. ರಾಜ್ಯದಲ್ಲಿಯೂ ತೀವ್ರ ಸ್ವರೂಪದ ಪ್ರತಿಭಟನೆ ಆಯೋಜಿಸುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ’ ಎಂದು ಶಿವಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನರೇಗಾ ಬಚಾವ್ ಸಂಗ್ರಾಮ್’ ಕಾರ್ಯಕ್ರಮದ ಆಯೋಜನೆ, ಬೂತ್ ಮಟ್ಟದ ಏಜೆಂಟರ ಪಟ್ಟಿ ತಯಾರಿ ಮತ್ತು ಸ್ಥಳಿಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯ ಕುರಿತು ಚರ್ಚಿಸಲು ಇದೇ 13ರಂದು ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಯಲಿದೆ.</p>.<p>‘ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳು, ಪಕ್ಷದ ಸಂಸದರು, ಶಾಸಕರು, ಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು, ಪರಾಜಿತ ಅಭ್ಯರ್ಥಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು ಸೇರಿದಂತೆ ಎಲ್ಲ ನಾಯಕರು ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.</p>.<p>‘ನರೇಗಾ ಕಾಯ್ದೆಗೆ ತಿದ್ದುಪಡಿ ತಂದು, ಅದರ ಹೆಸರು ಬದಲಿಸುವ ಜೊತೆಗೆ ಮೂಲ ಸ್ವರೂಪಕ್ಕೇ ಧಕ್ಕೆ ತಂದಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ದೇಶದಾದ್ಯಂತ ಪಕ್ಷ ಪ್ರತಿಭಟನೆ ಹಮ್ಮಿಕೊಳ್ಳಲಿದೆ. ರಾಜ್ಯದಲ್ಲಿಯೂ ತೀವ್ರ ಸ್ವರೂಪದ ಪ್ರತಿಭಟನೆ ಆಯೋಜಿಸುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ’ ಎಂದು ಶಿವಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>