ಸಾಮಾನ್ಯವಾಗಿ ಮುಂಗಾರು ಮಳೆ ಪ್ರವೇಶಿಸಿದ ಬಳಿಕ ಈ ಜ್ವರ ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಲ ಬೇಸಿಗೆ ಅವಧಿಯಲ್ಲಿಯೂ ಈ ಜ್ವರದಿಂದ ಹಲವರು ಬಳಲಿದ್ದಾರೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈವರೆಗೆ ರಾಜ್ಯದಾದ್ಯಂತ 34,143 ಡೆಂಗಿ ಶಂಕಿತರನ್ನು ಗುರುತಿಸಲಾಗಿದ್ದು, ಅವರಲ್ಲಿ 17,828 ಮಂದಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆ ಮಾಡಲಾಗಿದೆ. ಈವರೆಗೆ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.