ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿಮಾಡಿದ ನಿಯೋಗ, ಲಿಂಗಾಯತ ಪಂಚಮಸಾಲಿ ಸಮುದಾಯ ಮತ್ತು ಅದರ ಉಪ ಪಂಗಡಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಸೇರಿಸುವ ಬೇಡಿಕೆ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರ ಆಯೋಗಕ್ಕೆ ಸೂಚಿಸಿದೆ. ಅಧ್ಯಯನ ನಡೆಸಿ ವರದಿ ಸಲ್ಲಿಸುವುದು ವಿಳಂಬವಾಗುತ್ತಿದ್ದು, ಇದರಿಂದ ಸಮುದಾಯಕ್ಕೆ ತೊಂದರೆ ಆಗುತ್ತಿದೆ. ತಕ್ಷಣವೇ ಅಧ್ಯಯನ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿತು.