ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಈ ಅಡ್ಡಿಯನ್ನು ಪರಿಹರಿಸಿಕೊಳ್ಳಲು ಸಾಧ್ಯವಿದೆ. ವರದಿಯನ್ನು ಸರ್ಕಾರ ಒಪ್ಪಿಕೊಂಡು ಜಾರಿಗೆ ತರಬೇಕು. ಇದನ್ನೇ ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯ ತಪ್ಪಿಸಬೇಕು‘ ಎಂದು ಒತ್ತಾಯಿಸಿದರು.