ಬೆಂಗಳೂರು: ಅಧಿಭೋಗ ಪ್ರಮಾಣ ಪತ್ರ (ಆಕ್ಯುಪೆನ್ಸಿ ಸರ್ಟಿಫಿಕೇಟ್) ಇಲ್ಲದ ಲೈವ್ ಬ್ಯಾಂಡ್ಕಾರ್ಯನಿರ್ವಹಣೆಗೆ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ಲೈವ್ ಬ್ಯಾಂಡ್ಕಾರ್ಯನಿರ್ವಹಣೆಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ಕಡ್ಡಾಯ. ಆ ಪ್ರಮಾಣ ಪತ್ರ ಪಡೆದ ಬಳಿಕವಷ್ಟೇ ಲೈವ್ ಬ್ಯಾಂಡ್ಕಾರ್ಯ ನಿರ್ವಹಿಸಬೇಕು ಎಂದು ಏಕಸದಸ್ಯ ನ್ಯಾಯಪೀಠ ಹೇಳಿದೆ.
ಈ ಕುರಿತಂತೆ ನಗರ ಪೊಲೀಸ್ ಕಮಿಷನರ್ ನೀಡಿದ್ದ ನೋಟಿಸ್ ಪ್ರಶ್ನಿಸಿದ ಅರ್ಜಿಗಳ ಮೇಲಿನ ಆದೇಶವನ್ನು ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ಅಕ್ಯುಪೆನ್ಸಿ ಸರ್ಟಿಫಿಕೇಟ್ ಪಡೆದ ಲೈವ್ ಬ್ಯಾಂಡ್ ಕಾರ್ಯನಿರ್ವಹಣೆಗೆ ನ್ಯಾಯಪೀಠ ಹಸಿರು ನಿಶಾನೆ ತೋರಿದೆ.