<p><strong>ಬೆಂಗಳೂರು:</strong> ಅಧಿಭೋಗ ಪ್ರಮಾಣ ಪತ್ರ (ಆಕ್ಯುಪೆನ್ಸಿ ಸರ್ಟಿಫಿಕೇಟ್) ಇಲ್ಲದ ಲೈವ್ ಬ್ಯಾಂಡ್ಕಾರ್ಯನಿರ್ವಹಣೆಗೆ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.<br /><br />ಲೈವ್ ಬ್ಯಾಂಡ್ಕಾರ್ಯನಿರ್ವಹಣೆಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ಕಡ್ಡಾಯ. ಆ ಪ್ರಮಾಣ ಪತ್ರ ಪಡೆದ ಬಳಿಕವಷ್ಟೇ ಲೈವ್ ಬ್ಯಾಂಡ್ಕಾರ್ಯ ನಿರ್ವಹಿಸಬೇಕು ಎಂದು ಏಕಸದಸ್ಯ ನ್ಯಾಯಪೀಠ ಹೇಳಿದೆ.<br /><br />ಈ ಕುರಿತಂತೆ ನಗರ ಪೊಲೀಸ್ ಕಮಿಷನರ್ ನೀಡಿದ್ದ ನೋಟಿಸ್ ಪ್ರಶ್ನಿಸಿದ ಅರ್ಜಿಗಳ ಮೇಲಿನ ಆದೇಶವನ್ನು ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ಅಕ್ಯುಪೆನ್ಸಿ ಸರ್ಟಿಫಿಕೇಟ್ ಪಡೆದ ಲೈವ್ ಬ್ಯಾಂಡ್ ಕಾರ್ಯನಿರ್ವಹಣೆಗೆ ನ್ಯಾಯಪೀಠ ಹಸಿರು ನಿಶಾನೆ ತೋರಿದೆ.</p>.<p>1977 ಮತ್ತು ಅದಕ್ಕೂ ಹಿಂದಿನ ಹಳೆಯ ಕಟ್ಟಡಗಳಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡುವುದು ಸಂಬಂಧ ಪಟ್ಟ ಇಲಾಖೆಗೆ ಬಿಟ್ಟದ್ದು ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.</p>.<p>'ಕಟ್ಟಡದ ಪ್ರತಿ ಅಂತಸ್ತಿಗೂ ಅ ಸರ್ಟಿಫಿಕೇಟ್ ಕಡ್ಡಾಯ' ಎಂದು ತಿಳಿಸಿದ್ದು,ಅಕ್ಯುಪೆನ್ಸಿ ಸರ್ಟಿಫಿಕೇಟ್ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸಮಯ ನಿಗದಿಪಡಿಸುವಂತೆ ನಿರ್ದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಧಿಭೋಗ ಪ್ರಮಾಣ ಪತ್ರ (ಆಕ್ಯುಪೆನ್ಸಿ ಸರ್ಟಿಫಿಕೇಟ್) ಇಲ್ಲದ ಲೈವ್ ಬ್ಯಾಂಡ್ಕಾರ್ಯನಿರ್ವಹಣೆಗೆ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.<br /><br />ಲೈವ್ ಬ್ಯಾಂಡ್ಕಾರ್ಯನಿರ್ವಹಣೆಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ಕಡ್ಡಾಯ. ಆ ಪ್ರಮಾಣ ಪತ್ರ ಪಡೆದ ಬಳಿಕವಷ್ಟೇ ಲೈವ್ ಬ್ಯಾಂಡ್ಕಾರ್ಯ ನಿರ್ವಹಿಸಬೇಕು ಎಂದು ಏಕಸದಸ್ಯ ನ್ಯಾಯಪೀಠ ಹೇಳಿದೆ.<br /><br />ಈ ಕುರಿತಂತೆ ನಗರ ಪೊಲೀಸ್ ಕಮಿಷನರ್ ನೀಡಿದ್ದ ನೋಟಿಸ್ ಪ್ರಶ್ನಿಸಿದ ಅರ್ಜಿಗಳ ಮೇಲಿನ ಆದೇಶವನ್ನು ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ಅಕ್ಯುಪೆನ್ಸಿ ಸರ್ಟಿಫಿಕೇಟ್ ಪಡೆದ ಲೈವ್ ಬ್ಯಾಂಡ್ ಕಾರ್ಯನಿರ್ವಹಣೆಗೆ ನ್ಯಾಯಪೀಠ ಹಸಿರು ನಿಶಾನೆ ತೋರಿದೆ.</p>.<p>1977 ಮತ್ತು ಅದಕ್ಕೂ ಹಿಂದಿನ ಹಳೆಯ ಕಟ್ಟಡಗಳಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡುವುದು ಸಂಬಂಧ ಪಟ್ಟ ಇಲಾಖೆಗೆ ಬಿಟ್ಟದ್ದು ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.</p>.<p>'ಕಟ್ಟಡದ ಪ್ರತಿ ಅಂತಸ್ತಿಗೂ ಅ ಸರ್ಟಿಫಿಕೇಟ್ ಕಡ್ಡಾಯ' ಎಂದು ತಿಳಿಸಿದ್ದು,ಅಕ್ಯುಪೆನ್ಸಿ ಸರ್ಟಿಫಿಕೇಟ್ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸಮಯ ನಿಗದಿಪಡಿಸುವಂತೆ ನಿರ್ದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>