<p><strong>ಬೆಂಗಳೂರು</strong>: ಜನಗಣತಿ ವಿರೋಧಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲು ರಾಜ್ಯ ಒಕ್ಕಲಿಗರ ಸಂಘ ನಿರ್ಧರಿಸಿದ್ದು, ಏ.17ರ ನಂತರ ಹೋರಾಟದ ರೂಪುರೇಷೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.</p><p>'ಅನ್ಯಾಯಕ್ಕೆ ಒಳಗಾಗಿರುವ ಲಿಂಗಾಯತ, ಬ್ರಾಹ್ಮಣ ಸೇರಿ ಇತರ ಸಮುದಾಯಗಳನ್ನು ಒಟ್ಟುಗೂಡಿಸಿ ರಾಜ್ಯವನ್ನೇ ಬಂದ್ ಆಗುವ ರೀತಿಯಲ್ಲಿ ಹೋರಾಟ ಮಾಡುವುದಾಗಿ ಒಕ್ಕಲಿಗ ಸಂಘದ ಅಧ್ಯಕ್ಷರು ಸೇರಿದಂತೆ ಎಲ್ಲ ನಿರ್ದೇಶಕರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p><p>'ವರದಿ ಜಾರಿಯಾದರೆ ಸರ್ಕಾರ ಬೀಳಿಸುವ ಶಕ್ತಿ ನಮ್ಮ ಸಮುದಾಯಕ್ಕಿದೆ. ಜನಾಂಗಕ್ಕೆ ಅನ್ಯಾಯವಾದರೆ ಸಂಘದ ಎಲ್ಲ ನಿರ್ದೇಶಕರು ರಾಜೀನಾಮೆ ಕೊಟ್ಟು ಬೀದಿಗೆ ಇಳಿಯುತ್ತೇವೆ' ಎಂದು ಎಚ್ಚರಿಸಿದರು.</p><p>'ಇದು ಅವೈಜ್ಞಾನಿಕ ವರದಿಯಾಗಿದೆ. ಸಿದ್ದರಾಮಯ್ಯನವರಿಗಾಗಿ ತಯಾರಿಸಿದ ವರದಿಯಾಗಿದೆ. ಯಾವುದೇ ಕಾರಣಕ್ಕೂ ಈ ವರದಿಯನ್ನು ನಮ್ಮ ಸಂಘ ಒಪ್ಪುವುದಿಲ್ಲ' ಎಂದರು. ಸುದ್ದಿಗೊಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಕಾರ್ಯದರ್ಶಿ ಕೋನಪ್ಪಗೌಡ ಸೇರಿದಂತೆ ಸಂಘದ ಎಲ್ಲ ನಿರ್ದೇಶಕರು ಹಾಜರಿದ್ದರು.</p>.ಜಾತಿ ಜನಗಣತಿ ಅನುಷ್ಠಾನಕ್ಕೆ ವಿರೋಧವಿದೆ: ಶ್ರೀಶೈಲ ಪೀಠದ ಶಿವಾಚಾರ್ಯ ಸ್ವಾಮೀಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನಗಣತಿ ವಿರೋಧಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲು ರಾಜ್ಯ ಒಕ್ಕಲಿಗರ ಸಂಘ ನಿರ್ಧರಿಸಿದ್ದು, ಏ.17ರ ನಂತರ ಹೋರಾಟದ ರೂಪುರೇಷೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.</p><p>'ಅನ್ಯಾಯಕ್ಕೆ ಒಳಗಾಗಿರುವ ಲಿಂಗಾಯತ, ಬ್ರಾಹ್ಮಣ ಸೇರಿ ಇತರ ಸಮುದಾಯಗಳನ್ನು ಒಟ್ಟುಗೂಡಿಸಿ ರಾಜ್ಯವನ್ನೇ ಬಂದ್ ಆಗುವ ರೀತಿಯಲ್ಲಿ ಹೋರಾಟ ಮಾಡುವುದಾಗಿ ಒಕ್ಕಲಿಗ ಸಂಘದ ಅಧ್ಯಕ್ಷರು ಸೇರಿದಂತೆ ಎಲ್ಲ ನಿರ್ದೇಶಕರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p><p>'ವರದಿ ಜಾರಿಯಾದರೆ ಸರ್ಕಾರ ಬೀಳಿಸುವ ಶಕ್ತಿ ನಮ್ಮ ಸಮುದಾಯಕ್ಕಿದೆ. ಜನಾಂಗಕ್ಕೆ ಅನ್ಯಾಯವಾದರೆ ಸಂಘದ ಎಲ್ಲ ನಿರ್ದೇಶಕರು ರಾಜೀನಾಮೆ ಕೊಟ್ಟು ಬೀದಿಗೆ ಇಳಿಯುತ್ತೇವೆ' ಎಂದು ಎಚ್ಚರಿಸಿದರು.</p><p>'ಇದು ಅವೈಜ್ಞಾನಿಕ ವರದಿಯಾಗಿದೆ. ಸಿದ್ದರಾಮಯ್ಯನವರಿಗಾಗಿ ತಯಾರಿಸಿದ ವರದಿಯಾಗಿದೆ. ಯಾವುದೇ ಕಾರಣಕ್ಕೂ ಈ ವರದಿಯನ್ನು ನಮ್ಮ ಸಂಘ ಒಪ್ಪುವುದಿಲ್ಲ' ಎಂದರು. ಸುದ್ದಿಗೊಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಕಾರ್ಯದರ್ಶಿ ಕೋನಪ್ಪಗೌಡ ಸೇರಿದಂತೆ ಸಂಘದ ಎಲ್ಲ ನಿರ್ದೇಶಕರು ಹಾಜರಿದ್ದರು.</p>.ಜಾತಿ ಜನಗಣತಿ ಅನುಷ್ಠಾನಕ್ಕೆ ವಿರೋಧವಿದೆ: ಶ್ರೀಶೈಲ ಪೀಠದ ಶಿವಾಚಾರ್ಯ ಸ್ವಾಮೀಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>