<p><strong>ಶಿರಾ</strong>: ರಾಜ್ಯ ಸರ್ಕಾರ ಜನಗಣತಿ ಆಧಾರದ ಮೇಲೆ ಮೀಸಲಾತಿ ಕಲ್ಪಿಸಲು ಮುಂದಾಗಿದ್ದು, ಒಕ್ಕಲಿಗ ಸಮಾಜಕ್ಕೆ ಮೀಸಲಾತಿಯನ್ನು ಶೇ 4ರಿಂದ 6ಕ್ಕೆ ಏರಿಕೆ ಮಾಡುವಂತೆ ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.</p>.<p>ತಾಲ್ಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಶುಕ್ರವಾರ ನಡೆದ ಮಹಾಲಕ್ಷ್ಮಿ ದೇವಸ್ಥಾನದ ಸಂಪ್ರೋಕ್ಷಣ ಹಾಗೂ ಗೋಪುರ ಕಳಸ ಪ್ರತಿಷ್ಠಾಪನ ಮಹೋತ್ಸವದಲ್ಲಿ ಮಾತನಾಡಿದರು. </p>.<p>ಈಗಾಗಲೇ ಕುಂಚಿಟಿಗ ಸಮುದಾಯವನ್ನು ಕೇಂದ್ರ ಒಬಿಸಿ ಮೀಸಲಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದು ಸಂತಸದ ವಿಷಯ. ಸರ್ಕಾರ ಮೀಸಲಾತಿಯ ವಿಷಯದಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯ ಮಾಡಿದರೆ ಹೋರಾಟ ನಡೆಸಲಾಗುವುದು ಎಂದರು.</p>.<p>ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯ, ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ ವೀರಶೈವ ಸಮುದಾಯ ಬಲಿಷ್ಟವಾಗಿದೆ. ಆದರೆ ಈ ಸಮುದಾಯಗಳಲ್ಲಿ ಸಹ ಬಡತನ ರೇಖೆಗಿಂದ ಕೆಳಗಿರುವ ಸಾಕಷ್ಟು ಕುಟುಂಬಗಳಿದ್ದು ಅವರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದು ಅವರು ಸಮಾಜದ ಮುಖ್ಯವಾಹಿನಿಗೆ ಬರಲು ಮೀಸಲಾತಿ ಅನಿವಾರ್ಯ ಎಂದರು.</p>.<p>ಎಚ್.ಎನ್.ನಾಗೇಂದ್ರ, ಎಚ್.ಎಲ್.ರಂಗನಾಥ್, ನಾಗೇಶ್ ಗೌಡ, ಕೃಷ್ಣಪ್ಪ, ಕಾಂತರಾಜು, ರಘು, ವರುಣ, ದೇವರಾಜು, ಚಿಕ್ಕಣ್ಣ, ಮೋಹನ್, ಅನಿಲ್ ಗೌಡ, ಕಲ್ಲಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-17-1743372977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ರಾಜ್ಯ ಸರ್ಕಾರ ಜನಗಣತಿ ಆಧಾರದ ಮೇಲೆ ಮೀಸಲಾತಿ ಕಲ್ಪಿಸಲು ಮುಂದಾಗಿದ್ದು, ಒಕ್ಕಲಿಗ ಸಮಾಜಕ್ಕೆ ಮೀಸಲಾತಿಯನ್ನು ಶೇ 4ರಿಂದ 6ಕ್ಕೆ ಏರಿಕೆ ಮಾಡುವಂತೆ ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.</p>.<p>ತಾಲ್ಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಶುಕ್ರವಾರ ನಡೆದ ಮಹಾಲಕ್ಷ್ಮಿ ದೇವಸ್ಥಾನದ ಸಂಪ್ರೋಕ್ಷಣ ಹಾಗೂ ಗೋಪುರ ಕಳಸ ಪ್ರತಿಷ್ಠಾಪನ ಮಹೋತ್ಸವದಲ್ಲಿ ಮಾತನಾಡಿದರು. </p>.<p>ಈಗಾಗಲೇ ಕುಂಚಿಟಿಗ ಸಮುದಾಯವನ್ನು ಕೇಂದ್ರ ಒಬಿಸಿ ಮೀಸಲಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದು ಸಂತಸದ ವಿಷಯ. ಸರ್ಕಾರ ಮೀಸಲಾತಿಯ ವಿಷಯದಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯ ಮಾಡಿದರೆ ಹೋರಾಟ ನಡೆಸಲಾಗುವುದು ಎಂದರು.</p>.<p>ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯ, ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ ವೀರಶೈವ ಸಮುದಾಯ ಬಲಿಷ್ಟವಾಗಿದೆ. ಆದರೆ ಈ ಸಮುದಾಯಗಳಲ್ಲಿ ಸಹ ಬಡತನ ರೇಖೆಗಿಂದ ಕೆಳಗಿರುವ ಸಾಕಷ್ಟು ಕುಟುಂಬಗಳಿದ್ದು ಅವರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದು ಅವರು ಸಮಾಜದ ಮುಖ್ಯವಾಹಿನಿಗೆ ಬರಲು ಮೀಸಲಾತಿ ಅನಿವಾರ್ಯ ಎಂದರು.</p>.<p>ಎಚ್.ಎನ್.ನಾಗೇಂದ್ರ, ಎಚ್.ಎಲ್.ರಂಗನಾಥ್, ನಾಗೇಶ್ ಗೌಡ, ಕೃಷ್ಣಪ್ಪ, ಕಾಂತರಾಜು, ರಘು, ವರುಣ, ದೇವರಾಜು, ಚಿಕ್ಕಣ್ಣ, ಮೋಹನ್, ಅನಿಲ್ ಗೌಡ, ಕಲ್ಲಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-17-1743372977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>