<p><strong>ಬೆಂಗಳೂರು</strong>: ಅರಣ್ಯ ಇಲಾಖೆಯ ಕಾಯಂ ಅಧಿಕಾರಿ ಮತ್ತು ಸಿಬ್ಬಂದಿಗೆ ₹1 ಕೋಟಿ ಮೊತ್ತದ ಅಪಘಾತ ವಿಮೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗೆ ₹20 ಲಕ್ಷ ಮೊತ್ತದ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.</p>.<p>ಗುರುವಾರ ಪ್ರಕಟಣೆ ಹೊರಡಿಸಿರುವ ಅವರು, ‘ಇಲಾಖೆಯ ಸಿಬ್ಬಂದಿಗೆ ವಿಮೆ ಭದ್ರತೆ ಒದಗಿಸುವ ಉದ್ದೇಶದಿಂದ ಬ್ಯಾಂಕ್ ಆಫ್ ಬರೋಡಾದ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಕಾಡು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿ, ಹಸಿರು ಸೈನಿಕರು ಪ್ರತಿದಿನ ಅಪಾಯಗಳನ್ನು ಎದುರಿಸುತ್ತಾ ಶ್ರಮಿಸುತ್ತಿದ್ದಾರೆ. ಅಂತಹ ಶೌರ್ಯಶಾಲಿ ಮುಂಚೂಣಿ ಸಿಬ್ಬಂದಿಯನ್ನು ಇಲಾಖೆ ಕಳೆದುಕೊಂಡಿದೆ. ಹೀಗಾಗಿ ಎಲ್ಲ ಸಿಬ್ಬಂದಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ಈ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅರಣ್ಯ ಸಂರಕ್ಷಣೆಯಲ್ಲಿ ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಯ ಮಹತ್ತರ ಪಾತ್ರವಿದೆ. ಹೀಗಾಗಿ ಅವರಿಗೂ ₹20 ಲಕ್ಷಗಳ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗಿದೆ’ ಎಂದಿದ್ದಾರೆ.</p>.<p>‘ಇಲಾಖೆಯ ಎಲ್ಲ ಕಾಯಂ ಸಿಬ್ಬಂದಿಗೆ ಅವರ ವೇತನ ಮತ್ತು ಶ್ರೇಣಿಯ ಹೊರತಾಗಿ ಎಲ್ಲರಿಗೂ ₹1 ಕೋಟಿ ಮೊತ್ತದ ಅಪಘಾತ ಮರಣ ವಿಮೆಯನ್ನು ಬ್ಯಾಂಕ್ ಒದಗಿಸುತ್ತದೆ. ಸಿಬ್ಬಂದಿಯು ಕರ್ತವ್ಯದಲ್ಲಿ ಇದ್ದಾಗಲೇ ಮೃತಪಟ್ಟರೆ, ಹೆಚ್ಚುವರಿಯಾಗಿ ₹25 ಲಕ್ಷವನ್ನು ಬ್ಯಾಂಕ್ ಪಾವತಿಸಲಿದೆ’ ಎಂದು ವಿವರಿಸಿದ್ದಾರೆ.</p>.<p>‘ಈ ಸೌಲಭ್ಯ ಪಡೆಯಲು ಎಲ್ಲ ಸಿಬ್ಬಂದಿ ಬ್ಯಾಂಕ್ ಆಫ್ ಬರೋಡಾದಲ್ಲಿ ವೇತನ ಖಾತೆಯನ್ನು ತೆರೆಯಬೇಕಿದೆ. ನಿವೃತ್ತಿ ನಂತರವೂ ಪಿಂಚಣಿ ಖಾತೆಯನ್ನು ಅದೇ ಬ್ಯಾಂಕ್ನಲ್ಲಿ ಮುಂದುವರೆಸಿದರೆ, ಅಪಘಾತ ವಿಮೆ ಸೌಲಭ್ಯ 70 ವರ್ಷ ವಯಸ್ಸಿನವರೆಗೆ ಮುಂದುವರೆಯಲಿದೆ. ಅಲ್ಲದೆ, ಕಾಯಂ ಉದ್ಯೋಗಿಗಳಿಗೆ ₹10 ಲಕ್ಷದ ಜೀವ ವಿಮೆ ರಕ್ಷಣೆಯನ್ನೂ ಬ್ಯಾಂಕ್ ಒದಗಿಸುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.</p>.<ul><li><p> ಮುಂಚೂಣಿ ಹೊರಗುತ್ತಿಗೆ ಸಿಬ್ಬಂದಿಗೂ ₹20 ಲಕ್ಷದ ಅಪಘಾತ ವಿಮೆ ಭದ್ರತೆ</p></li><li><p> ವಿಮೆ ಮತ್ತಿತರ ಸೌಲಭ್ಯ ಒದಗಿಸಲು ಬ್ಯಾಂಕ್ ಆಫ್ ಬರೋಡಾ ಜತೆ ಇಲಾಖೆ ಒಪ್ಪಂದ </p></li><li><p>ಬ್ಯಾಂಕ್ ಆಫ್ ಬರೋಡಾದಲ್ಲಿ ಸಂಬಳ ಖಾತೆ ತೆರೆಯಲು ಸಿಬ್ಬಂದಿಗೆ ಸೂಚನೆ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅರಣ್ಯ ಇಲಾಖೆಯ ಕಾಯಂ ಅಧಿಕಾರಿ ಮತ್ತು ಸಿಬ್ಬಂದಿಗೆ ₹1 ಕೋಟಿ ಮೊತ್ತದ ಅಪಘಾತ ವಿಮೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗೆ ₹20 ಲಕ್ಷ ಮೊತ್ತದ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.</p>.<p>ಗುರುವಾರ ಪ್ರಕಟಣೆ ಹೊರಡಿಸಿರುವ ಅವರು, ‘ಇಲಾಖೆಯ ಸಿಬ್ಬಂದಿಗೆ ವಿಮೆ ಭದ್ರತೆ ಒದಗಿಸುವ ಉದ್ದೇಶದಿಂದ ಬ್ಯಾಂಕ್ ಆಫ್ ಬರೋಡಾದ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಕಾಡು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿ, ಹಸಿರು ಸೈನಿಕರು ಪ್ರತಿದಿನ ಅಪಾಯಗಳನ್ನು ಎದುರಿಸುತ್ತಾ ಶ್ರಮಿಸುತ್ತಿದ್ದಾರೆ. ಅಂತಹ ಶೌರ್ಯಶಾಲಿ ಮುಂಚೂಣಿ ಸಿಬ್ಬಂದಿಯನ್ನು ಇಲಾಖೆ ಕಳೆದುಕೊಂಡಿದೆ. ಹೀಗಾಗಿ ಎಲ್ಲ ಸಿಬ್ಬಂದಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ಈ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅರಣ್ಯ ಸಂರಕ್ಷಣೆಯಲ್ಲಿ ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಯ ಮಹತ್ತರ ಪಾತ್ರವಿದೆ. ಹೀಗಾಗಿ ಅವರಿಗೂ ₹20 ಲಕ್ಷಗಳ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗಿದೆ’ ಎಂದಿದ್ದಾರೆ.</p>.<p>‘ಇಲಾಖೆಯ ಎಲ್ಲ ಕಾಯಂ ಸಿಬ್ಬಂದಿಗೆ ಅವರ ವೇತನ ಮತ್ತು ಶ್ರೇಣಿಯ ಹೊರತಾಗಿ ಎಲ್ಲರಿಗೂ ₹1 ಕೋಟಿ ಮೊತ್ತದ ಅಪಘಾತ ಮರಣ ವಿಮೆಯನ್ನು ಬ್ಯಾಂಕ್ ಒದಗಿಸುತ್ತದೆ. ಸಿಬ್ಬಂದಿಯು ಕರ್ತವ್ಯದಲ್ಲಿ ಇದ್ದಾಗಲೇ ಮೃತಪಟ್ಟರೆ, ಹೆಚ್ಚುವರಿಯಾಗಿ ₹25 ಲಕ್ಷವನ್ನು ಬ್ಯಾಂಕ್ ಪಾವತಿಸಲಿದೆ’ ಎಂದು ವಿವರಿಸಿದ್ದಾರೆ.</p>.<p>‘ಈ ಸೌಲಭ್ಯ ಪಡೆಯಲು ಎಲ್ಲ ಸಿಬ್ಬಂದಿ ಬ್ಯಾಂಕ್ ಆಫ್ ಬರೋಡಾದಲ್ಲಿ ವೇತನ ಖಾತೆಯನ್ನು ತೆರೆಯಬೇಕಿದೆ. ನಿವೃತ್ತಿ ನಂತರವೂ ಪಿಂಚಣಿ ಖಾತೆಯನ್ನು ಅದೇ ಬ್ಯಾಂಕ್ನಲ್ಲಿ ಮುಂದುವರೆಸಿದರೆ, ಅಪಘಾತ ವಿಮೆ ಸೌಲಭ್ಯ 70 ವರ್ಷ ವಯಸ್ಸಿನವರೆಗೆ ಮುಂದುವರೆಯಲಿದೆ. ಅಲ್ಲದೆ, ಕಾಯಂ ಉದ್ಯೋಗಿಗಳಿಗೆ ₹10 ಲಕ್ಷದ ಜೀವ ವಿಮೆ ರಕ್ಷಣೆಯನ್ನೂ ಬ್ಯಾಂಕ್ ಒದಗಿಸುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.</p>.<ul><li><p> ಮುಂಚೂಣಿ ಹೊರಗುತ್ತಿಗೆ ಸಿಬ್ಬಂದಿಗೂ ₹20 ಲಕ್ಷದ ಅಪಘಾತ ವಿಮೆ ಭದ್ರತೆ</p></li><li><p> ವಿಮೆ ಮತ್ತಿತರ ಸೌಲಭ್ಯ ಒದಗಿಸಲು ಬ್ಯಾಂಕ್ ಆಫ್ ಬರೋಡಾ ಜತೆ ಇಲಾಖೆ ಒಪ್ಪಂದ </p></li><li><p>ಬ್ಯಾಂಕ್ ಆಫ್ ಬರೋಡಾದಲ್ಲಿ ಸಂಬಳ ಖಾತೆ ತೆರೆಯಲು ಸಿಬ್ಬಂದಿಗೆ ಸೂಚನೆ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>