ಬೆಂಗಳೂರು: ಕೋವಿಡ್ನಿಂದ ಮೃತಪಟ್ಟ ಬಡ ಕುಟುಂಬದವರಿಗೆ ಮುಂದಿನ ಎರಡು– ಮೂರು ದಿನಗಳಲ್ಲಿ ತಲಾ ₹1 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದರು.
ಬೆಲೆ ಏರಿಕೆ ಮೇಲಿನ ಚರ್ಚೆಗೆ ಉತ್ತರಿ ಸಿದ ಅವರು, ಈವರೆಗೆ ಒಟ್ಟು 7 ರಿಂದ 8 ಸಾವಿರ ಬಿಪಿಎಲ್ ಕುಟುಂಬಗಳು ನೋಂದಣಿ ಮಾಡಿವೆ. ನೇರವಾಗಿ ಅವರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಅವರು ಹೇಳಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ವಿಷಯ ಪ್ರಸ್ತಾಪಿಸಿ, ಮೃತಪಟ್ಟವ ರಿಗೆ ತಲಾ ₹1 ಲಕ್ಷ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು. ಆದರೆ, ಈವ ರೆಗೂ ಪರಿಹಾರ ಮೊತ್ತವನ್ನು ನೀಡಿಲ್ಲ ಎಂದರು.
‘ಕೋವಿಡ್: ಸಿಗದ ₹1 ಲಕ್ಷ ಪರಿಹಾರ’ ಎಂಬ ಶೀರ್ಷಿಕೆಯಡಿ ಈ ಬಗ್ಗೆ ‘ಪ್ರಜಾವಾಣಿ’ಯು ವಿಶೇಷ ವರದಿ ಪ್ರಕಟಿಸಿತ್ತು.