<p><strong>ಬೆಂಗಳೂರು:</strong> ಪ್ರತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ದಾಖಲೆ ನೀಡುವ ಬದಲು ಒಮ್ಮೆ ನೀಡಿದರೆ ಎಲ್ಲ ಪರೀಕ್ಷೆಗಳಿಗೆ ಅದೇ ದಾಖಲೆಗಳು ಬಳಕೆಯಾಗುವಂತೆ ತಂತ್ರಾಂಶ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.</p>.<p>ಸೋಮವಾರ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹೆಚ್ಚುವರಿ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೆ–ಸೆಟ್ ಪರೀಕ್ಷೆ ಅಥವಾ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ದಾಖಲೆಗಳನ್ನು ಸಲ್ಲಿಸಿದವರು ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಅರ್ಜಿ ಸಲ್ಲಿಸಿದರೆ ಸಾಕು. ಅಂಥ ತಂತ್ರಜ್ಞಾನವನ್ನು ಕೆಇಎ ಅಳವಡಿಸಿಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಡಿಜಿಟಲ್ ತಂತ್ರಜ್ಞಾನದ ಸದ್ಬಳಕೆ ಮತ್ತು ದುರ್ಬಳಕೆ ಎರಡೂ ಇವೆ. ಕಳೆದ ವರ್ಷ ನೀಟ್ ಪರೀಕ್ಷೆಯಲ್ಲಿ ಉಂಟಾದ ಗೊಂದಲವು ಪರೀಕ್ಷಾ ವ್ಯವಸ್ಥೆಗೆ ಸವಾಲಾಗಿತ್ತು. ಕೆಇಎ ವೆಬ್ಕಾಸ್ಟಿಂಗ್ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ ನಡೆಸುವ ಮೂಲಕ ತಂತ್ರಜ್ಞಾನದ ದುರ್ಬಳಕೆಯನ್ನು ತಡೆಯಲಾಗಿದೆ ಎಂದರು.</p>.<p>ಕಳೆದ ವರ್ಷ ಸುಮಾರು 18 ಇಲಾಖೆಗಳ 6 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಯಾವುದೇ ಗೊಂದಲ ಇಲ್ಲದಂತೆ ನೇಮಕಾತಿ ಪರೀಕ್ಷೆ ನಡೆಸಲಾಗಿದೆ. ಸಹಾಯಕ ಪ್ರಾಧ್ಯಾಪಕ ಹುದ್ದೆ, ತಾಂತ್ರಿಕ ಶಿಕ್ಷಕ ಇಲಾಖೆಯ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.</p>.<p>ಸಹಾಯವಾಣಿ ಜಾಮ್ ಆಗುವುದು, ಸರ್ವರ್ ಸಮಸ್ಯೆಯಿಂದ ಫಲಿತಾಂಶ ಘೋಷಣೆ ತಡವಾಗುವುದು ಮುಂತಾದ ಸಮಸ್ಯೆ ಸರಿಪಡಿಸಲು ಪ್ರತ್ಯೇಕ ಸರ್ವರ್ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದರು.</p>.<p>ಸಮಾಜದಲ್ಲಿ ದಾರಿ ತಪ್ಪಿಸುವವರ ಸಂಖ್ಯೆ ದೊಡ್ಡದಿದೆ. ಅಧಿಕಾರಿಗಳು, ಸಿಬ್ಬಂದಿ ಯಾವುದೇ ಆಮಿಷಕ್ಕೆ ಒಳಗಾಗದೇ ಪರೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ, ವಿಶ್ರಾಂತ ಕುಲಪತಿ ತಿಮ್ಮೇಗೌಡ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಎಚ್, ಆಡಳಿತಾಧಿಕಾರಿ ಇಸ್ಲಾವುದ್ಧಿನ್ ಜೆ. ಗದ್ಯಾಳ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ದಾಖಲೆ ನೀಡುವ ಬದಲು ಒಮ್ಮೆ ನೀಡಿದರೆ ಎಲ್ಲ ಪರೀಕ್ಷೆಗಳಿಗೆ ಅದೇ ದಾಖಲೆಗಳು ಬಳಕೆಯಾಗುವಂತೆ ತಂತ್ರಾಂಶ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.</p>.<p>ಸೋಮವಾರ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹೆಚ್ಚುವರಿ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೆ–ಸೆಟ್ ಪರೀಕ್ಷೆ ಅಥವಾ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ದಾಖಲೆಗಳನ್ನು ಸಲ್ಲಿಸಿದವರು ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಅರ್ಜಿ ಸಲ್ಲಿಸಿದರೆ ಸಾಕು. ಅಂಥ ತಂತ್ರಜ್ಞಾನವನ್ನು ಕೆಇಎ ಅಳವಡಿಸಿಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಡಿಜಿಟಲ್ ತಂತ್ರಜ್ಞಾನದ ಸದ್ಬಳಕೆ ಮತ್ತು ದುರ್ಬಳಕೆ ಎರಡೂ ಇವೆ. ಕಳೆದ ವರ್ಷ ನೀಟ್ ಪರೀಕ್ಷೆಯಲ್ಲಿ ಉಂಟಾದ ಗೊಂದಲವು ಪರೀಕ್ಷಾ ವ್ಯವಸ್ಥೆಗೆ ಸವಾಲಾಗಿತ್ತು. ಕೆಇಎ ವೆಬ್ಕಾಸ್ಟಿಂಗ್ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ ನಡೆಸುವ ಮೂಲಕ ತಂತ್ರಜ್ಞಾನದ ದುರ್ಬಳಕೆಯನ್ನು ತಡೆಯಲಾಗಿದೆ ಎಂದರು.</p>.<p>ಕಳೆದ ವರ್ಷ ಸುಮಾರು 18 ಇಲಾಖೆಗಳ 6 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಯಾವುದೇ ಗೊಂದಲ ಇಲ್ಲದಂತೆ ನೇಮಕಾತಿ ಪರೀಕ್ಷೆ ನಡೆಸಲಾಗಿದೆ. ಸಹಾಯಕ ಪ್ರಾಧ್ಯಾಪಕ ಹುದ್ದೆ, ತಾಂತ್ರಿಕ ಶಿಕ್ಷಕ ಇಲಾಖೆಯ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.</p>.<p>ಸಹಾಯವಾಣಿ ಜಾಮ್ ಆಗುವುದು, ಸರ್ವರ್ ಸಮಸ್ಯೆಯಿಂದ ಫಲಿತಾಂಶ ಘೋಷಣೆ ತಡವಾಗುವುದು ಮುಂತಾದ ಸಮಸ್ಯೆ ಸರಿಪಡಿಸಲು ಪ್ರತ್ಯೇಕ ಸರ್ವರ್ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದರು.</p>.<p>ಸಮಾಜದಲ್ಲಿ ದಾರಿ ತಪ್ಪಿಸುವವರ ಸಂಖ್ಯೆ ದೊಡ್ಡದಿದೆ. ಅಧಿಕಾರಿಗಳು, ಸಿಬ್ಬಂದಿ ಯಾವುದೇ ಆಮಿಷಕ್ಕೆ ಒಳಗಾಗದೇ ಪರೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ, ವಿಶ್ರಾಂತ ಕುಲಪತಿ ತಿಮ್ಮೇಗೌಡ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಎಚ್, ಆಡಳಿತಾಧಿಕಾರಿ ಇಸ್ಲಾವುದ್ಧಿನ್ ಜೆ. ಗದ್ಯಾಳ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>