<p><strong>ಬೆಂಗಳೂರು:</strong> ಕೇಂದ್ರ ಸರ್ಕಾರ ಜಾರಿ ಮಾಡಿದ್ದಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಆರಂಭಿಸಿದ ಹೋರಾಟಕ್ಕೆ ಒಂದು ವರ್ಷ ತುಂಬಿದ ನೆನಪಿಗಾಗಿ ರಾಜ್ಯದ ವಿವಿಧ ಜಿಲ್ಲೆಗಳ ರೈತರು ಮತ್ತು ಪ್ರಗತಿಪರ ಸಂಘಟನೆಗಳು ಶುಕ್ರವಾರ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಮಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಹೊಸಪೇಟೆ, ತುಮಕೂರು, ಚಿತ್ರದುರ್ಗ, ವಿಜಯನಗರ, ಹುಬ್ಬಳ್ಳಿ ಸೇರಿ ಹಲವು ಜಿಲ್ಲಾ ಕೇಂದ್ರಗಳಲ್ಲಿ ರೈತರು ಹೆದ್ದಾರಿಗಳನ್ನು ತಡೆದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.</p>.<p>ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಕಂಪನಿ ಪರ ನೀತಿ ಅನುಸರಿಸುತ್ತಿವೆ. ಕೃಷಿ ವಲಯಕ್ಕೆ ಕಾರ್ಪೊರೇಟ್ ಕಂಪನಿಗಳು ಬೇಡವೇ ಬೇಡ. ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ದಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ತಲಾ ₹50 ಲಕ್ಷ ಪರಿಹಾರ ಮತ್ತು ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ರೂಪಿಸಿದ ಭೂಸ್ವಾಧೀನ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕುಎಂದೂ ಒತ್ತಾಯಿಸಿದರು.</p>.<p class="Subhead"><strong>8 ಗಂಟೆ ಹೆದ್ದಾರಿ ತಡೆ:</strong><br />ಚಿಕ್ಕಬಳ್ಳಾಪುರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಚದಲಪುರ ರಾಷ್ಟ್ರೀಯ ಹೆದ್ದಾರಿ ತಡೆ ನಡೆಯಿತು. ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳ ಪ್ರಗತಿಪರ ಸಂಘಟನೆಗಳ ಸದಸ್ಯರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಬಳಿ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು 8 ಗಂಟೆಗಳ ಬಂದ್ ಮಾಡಿದರು. ಹೆದ್ದಾರಿಯಲ್ಲಿ ಎತ್ತಿನ ಗಾಡಿ<br />ಗಳು, ಟ್ರ್ಯಾಕ್ಟರ್ಗಳನ್ನು ನಿಲ್ಲಿಸಿ, ರಸ್ತೆಯಲ್ಲೇ ಜಾನುವಾರುಗಳನ್ನೂ ಕಟ್ಟಿ ಹಾಕಿದರು.</p>.<p>ಹುಬ್ಬಳ್ಳಿಯಲ್ಲಿ ಕಳಸಾ– ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ಸ್ವಾಮಿನಾಥನ್ ವರದಿ ಜಾರಿ ಮತ್ತು ಕಳಸಾ ಬಂಡೂರಿ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕು ಎಂದು ನಗರದ ಗಬ್ಬೂರು ಬೈಪಾಸ್ ಮತ್ತು ಬೆಂಗಳೂರು– ಪೂನಾ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಧರಣಿ ನಡೆಸಿದರು.</p>.<p>ಕೋಲಾರದಲ್ಲಿ ರೈತ ಸಂಘದ ಕಾರ್ಯಕರ್ತರು ಎತ್ತಿನ ಬಂಡಿ, ನೇಗಿಲುಗಳು, ಕೋಳಿಗಳು ಮತ್ತು ಬೆಳೆಗಳ ಸಮೇತ ಕೋಲಾರ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿದರು.</p>.<p>ರೈತರ ಆಂದೋಲನ ಬೆಂಬಲಿಸಿ ಬೆಂಗಳೂರಿನಿಂದ ಯುವಕರ ತಂಡ ಶ್ರೀರಂಗಪಟ್ಟಣದವರೆಗೆ ಬೈಕ್ ಜಾಥಾ ನಡೆಸಿತು.</p>.<p><strong>‘ಕೇಂದ್ರದ ನಡೆ ನೋಡಿ ತೀರ್ಮಾನ’</strong></p>.<p>ಚಿತ್ರದುರ್ಗ: ‘ಕೃಷಿ ಕಾಯ್ದೆಗಳ ಬಗ್ಗೆ ಲೋಕಸಭೆಯ ಅಧಿವೇಶನದಲ್ಲಿ ನಡೆಯುವ ಚರ್ಚೆಯ ಆಧಾರದ ಮೇರೆಗೆ ರಾಜ್ಯದ ಕಾಯ್ದೆಗಳ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>‘ಎಪಿಎಂಸಿ ಕಾಯ್ದೆ ಹಾಗೂ ಇತರ ಕಾಯ್ದೆಗಳ ಮಧ್ಯೆ ವ್ಯತ್ಯಾಸವಿದೆ. ಕೇಂದ್ರದ ನಡೆಯನ್ನು ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು’ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಸರ್ಕಾರ ಜಾರಿ ಮಾಡಿದ್ದಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಆರಂಭಿಸಿದ ಹೋರಾಟಕ್ಕೆ ಒಂದು ವರ್ಷ ತುಂಬಿದ ನೆನಪಿಗಾಗಿ ರಾಜ್ಯದ ವಿವಿಧ ಜಿಲ್ಲೆಗಳ ರೈತರು ಮತ್ತು ಪ್ರಗತಿಪರ ಸಂಘಟನೆಗಳು ಶುಕ್ರವಾರ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಮಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಹೊಸಪೇಟೆ, ತುಮಕೂರು, ಚಿತ್ರದುರ್ಗ, ವಿಜಯನಗರ, ಹುಬ್ಬಳ್ಳಿ ಸೇರಿ ಹಲವು ಜಿಲ್ಲಾ ಕೇಂದ್ರಗಳಲ್ಲಿ ರೈತರು ಹೆದ್ದಾರಿಗಳನ್ನು ತಡೆದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.</p>.<p>ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಕಂಪನಿ ಪರ ನೀತಿ ಅನುಸರಿಸುತ್ತಿವೆ. ಕೃಷಿ ವಲಯಕ್ಕೆ ಕಾರ್ಪೊರೇಟ್ ಕಂಪನಿಗಳು ಬೇಡವೇ ಬೇಡ. ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ದಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ತಲಾ ₹50 ಲಕ್ಷ ಪರಿಹಾರ ಮತ್ತು ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ರೂಪಿಸಿದ ಭೂಸ್ವಾಧೀನ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕುಎಂದೂ ಒತ್ತಾಯಿಸಿದರು.</p>.<p class="Subhead"><strong>8 ಗಂಟೆ ಹೆದ್ದಾರಿ ತಡೆ:</strong><br />ಚಿಕ್ಕಬಳ್ಳಾಪುರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಚದಲಪುರ ರಾಷ್ಟ್ರೀಯ ಹೆದ್ದಾರಿ ತಡೆ ನಡೆಯಿತು. ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳ ಪ್ರಗತಿಪರ ಸಂಘಟನೆಗಳ ಸದಸ್ಯರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಬಳಿ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು 8 ಗಂಟೆಗಳ ಬಂದ್ ಮಾಡಿದರು. ಹೆದ್ದಾರಿಯಲ್ಲಿ ಎತ್ತಿನ ಗಾಡಿ<br />ಗಳು, ಟ್ರ್ಯಾಕ್ಟರ್ಗಳನ್ನು ನಿಲ್ಲಿಸಿ, ರಸ್ತೆಯಲ್ಲೇ ಜಾನುವಾರುಗಳನ್ನೂ ಕಟ್ಟಿ ಹಾಕಿದರು.</p>.<p>ಹುಬ್ಬಳ್ಳಿಯಲ್ಲಿ ಕಳಸಾ– ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ಸ್ವಾಮಿನಾಥನ್ ವರದಿ ಜಾರಿ ಮತ್ತು ಕಳಸಾ ಬಂಡೂರಿ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕು ಎಂದು ನಗರದ ಗಬ್ಬೂರು ಬೈಪಾಸ್ ಮತ್ತು ಬೆಂಗಳೂರು– ಪೂನಾ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಧರಣಿ ನಡೆಸಿದರು.</p>.<p>ಕೋಲಾರದಲ್ಲಿ ರೈತ ಸಂಘದ ಕಾರ್ಯಕರ್ತರು ಎತ್ತಿನ ಬಂಡಿ, ನೇಗಿಲುಗಳು, ಕೋಳಿಗಳು ಮತ್ತು ಬೆಳೆಗಳ ಸಮೇತ ಕೋಲಾರ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿದರು.</p>.<p>ರೈತರ ಆಂದೋಲನ ಬೆಂಬಲಿಸಿ ಬೆಂಗಳೂರಿನಿಂದ ಯುವಕರ ತಂಡ ಶ್ರೀರಂಗಪಟ್ಟಣದವರೆಗೆ ಬೈಕ್ ಜಾಥಾ ನಡೆಸಿತು.</p>.<p><strong>‘ಕೇಂದ್ರದ ನಡೆ ನೋಡಿ ತೀರ್ಮಾನ’</strong></p>.<p>ಚಿತ್ರದುರ್ಗ: ‘ಕೃಷಿ ಕಾಯ್ದೆಗಳ ಬಗ್ಗೆ ಲೋಕಸಭೆಯ ಅಧಿವೇಶನದಲ್ಲಿ ನಡೆಯುವ ಚರ್ಚೆಯ ಆಧಾರದ ಮೇರೆಗೆ ರಾಜ್ಯದ ಕಾಯ್ದೆಗಳ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>‘ಎಪಿಎಂಸಿ ಕಾಯ್ದೆ ಹಾಗೂ ಇತರ ಕಾಯ್ದೆಗಳ ಮಧ್ಯೆ ವ್ಯತ್ಯಾಸವಿದೆ. ಕೇಂದ್ರದ ನಡೆಯನ್ನು ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು’ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>