<p><strong>ಬೆಂಗಳೂರು:</strong> ಈರುಳ್ಳಿ ಬೆಲೆ ಕುಸಿತದ ಕಾರಣ ಪಿಡಿಪಿಎಸ್ (ಪ್ರೈಸ್ ಡಿಫಿಷಿಯನ್ಸಿ ಪ್ರೊಕ್ಯುರ್ಮೆಂಟ್ ಸ್ಕೀಮ್) ಅಡಿ ಈರುಳ್ಳಿ ಖರೀದಿಸುವ ಪ್ರಯತ್ನ ನಡೆದಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.</p>.<p>ಇದೇ ಮುಂಗಾರು ಹಂಗಾಮಿನಲ್ಲಿ ಸುರಿದ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಈರುಳ್ಳಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇದರಿಂದ ಬೆಲೆ ಕುಸಿದು ಹೋಗಿದೆ. ಕಳೆದ ಸಾಲಿನ ಸರಾಸರಿ ಈರುಳ್ಳಿ ಮಾರುಕಟ್ಟೆ ಬೆಲೆಗೆ ಹೋಲಿಕೆ ಮಾಡಿದರೆ ಈ ಸಾಲಿನಲ್ಲಿ ಮಾರಾಟ ದರ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಇದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಸೇರಿ ಒಟ್ಟು 2.05 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗುತ್ತಿದೆ. ವಾರ್ಷಿಕ ಉತ್ಪನ್ನ 27 ಲಕ್ಷ ಮೆಟ್ರಿಕ್ ಟನ್ಗಳು. ಮುಖ್ಯವಾಗಿ ವಿಜಯಪುರ, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತದೆ ಎಂದಿದ್ದಾರೆ. </p>.<p>ಜಮೀನಿನಲ್ಲೇ ಈರುಳ್ಳಿ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆ ಸೇರಿ ಚರ್ಚೆ ಮಾಡಿದ್ದು, ಎಂಐಎಸ್ (ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ) ಅಡಿಯಲ್ಲಿ ಖರೀದಿಸಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದರು. ಆದರೆ, ಪಿಡಿಪಿಎಸ್ ಅಡಿ ಈರುಳ್ಳಿ ಖರೀದಿ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಶಿವಾನಂದ ಪಾಟೀಲ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಈರುಳ್ಳಿ ಬೆಲೆ ಕುಸಿತದ ಕಾರಣ ಪಿಡಿಪಿಎಸ್ (ಪ್ರೈಸ್ ಡಿಫಿಷಿಯನ್ಸಿ ಪ್ರೊಕ್ಯುರ್ಮೆಂಟ್ ಸ್ಕೀಮ್) ಅಡಿ ಈರುಳ್ಳಿ ಖರೀದಿಸುವ ಪ್ರಯತ್ನ ನಡೆದಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.</p>.<p>ಇದೇ ಮುಂಗಾರು ಹಂಗಾಮಿನಲ್ಲಿ ಸುರಿದ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಈರುಳ್ಳಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇದರಿಂದ ಬೆಲೆ ಕುಸಿದು ಹೋಗಿದೆ. ಕಳೆದ ಸಾಲಿನ ಸರಾಸರಿ ಈರುಳ್ಳಿ ಮಾರುಕಟ್ಟೆ ಬೆಲೆಗೆ ಹೋಲಿಕೆ ಮಾಡಿದರೆ ಈ ಸಾಲಿನಲ್ಲಿ ಮಾರಾಟ ದರ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಇದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಸೇರಿ ಒಟ್ಟು 2.05 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗುತ್ತಿದೆ. ವಾರ್ಷಿಕ ಉತ್ಪನ್ನ 27 ಲಕ್ಷ ಮೆಟ್ರಿಕ್ ಟನ್ಗಳು. ಮುಖ್ಯವಾಗಿ ವಿಜಯಪುರ, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತದೆ ಎಂದಿದ್ದಾರೆ. </p>.<p>ಜಮೀನಿನಲ್ಲೇ ಈರುಳ್ಳಿ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆ ಸೇರಿ ಚರ್ಚೆ ಮಾಡಿದ್ದು, ಎಂಐಎಸ್ (ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ) ಅಡಿಯಲ್ಲಿ ಖರೀದಿಸಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದರು. ಆದರೆ, ಪಿಡಿಪಿಎಸ್ ಅಡಿ ಈರುಳ್ಳಿ ಖರೀದಿ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಶಿವಾನಂದ ಪಾಟೀಲ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>