<p><strong>ಬೆಂಗಳೂರು: </strong>ಹೆಸರಘಟ್ಟದ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶವೆಂದು ಘೋಷಿಸುವ ಮೂಲಕ ರಕ್ಷಿಸಬೇಕು ಎಂದು ಪರಿಸರ ಪ್ರೇಮಿಗಳು ಆನ್ಲೈನ್ ವೇದಿಕೆಯಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ.</p>.<p>Jhatkaa.org ವೆಬ್ಸೈಟ್ ಮೂಲಕ SaveHesaraghatta ಎಂಬ ಅಭಿಯಾನ ನಡೆಯುತ್ತಿದೆ. ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶ ಘೋಷಿಸಬೇಕೆಂಬ ಬೇಡಿಕೆ ಪರವಾಗಿ ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಇದೆ. ಈವರೆಗೆ 41,625 ಮಂದಿ ಸಹಿ ಮಾಡುವ ಮೂಲಕ ಆನ್ಲೈನ್ ಅಭಿಯಾನವನ್ನು ಬೆಂಬಲಿಸಿದ್ದಾರೆ.</p>.<p>ಹೆಸರಘಟ್ಟ ಸುತ್ತಮುತ್ತಲಿನ 5,010 ಎಕರೆ ಪ್ರದೇಶವನ್ನು ‘ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಪ್ರದೇಶ’ ಎಂದು ಘೋಷಿಸುವ ಪ್ರಸ್ತಾವ ರಾಜ್ಯ ವನ್ಯಜೀವಿ ಮಂಡಳಿಗೆ ಸಲ್ಲಿಕೆಯಾಗಿತ್ತು. ಈ ಪ್ರಸ್ತಾವವನ್ನು ಮಂಡಳಿಯು 2021ರ ಜನವರಿ 19ರಂದು ನಡೆದ ಸಭೆಯಲ್ಲಿ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಪರಿಸರಾಸಕ್ತರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಸ್ತಾವದ ಕುರಿತು ಪುನಃ ಚರ್ಚಿಸಿ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಮಂಡಳಿಗೆ ನಿರ್ದೇಶನ ನೀಡಿತ್ತು.</p>.<p>ಸೆಪ್ಟೆಂಬರ್ 5ರಂದು ನಡೆಯುವ ವನ್ಯಜೀವಿ ಮಂಡಳಿ ಸಭೆಯ ಕಾರ್ಯಸೂಚಿಯಲ್ಲಿ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶ ಘೋಷಣೆಯ ಪ್ರಸ್ತಾವ ಇದೆ. ಪುನಃ ಪ್ರಸ್ತಾವವನ್ನು ತಿರಸ್ಕರಿಸಿ, ಯೋಜನೆಯೊಂದಕ್ಕೆ ಈ ಪ್ರದೇಶದ ಜಮೀನನ್ನು ಬಳಕೆ ಮಾಡಲು ಒಪ್ಪಿಗೆ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನದಿಂದ ಪರಿಸರಾಸಕ್ತರು ಅಭಿಯಾನ ಆರಂಭಿಸಿದ್ದಾರೆ.</p>.<p>‘1,912 ಎಕರೆಯಷ್ಟು ವಿಸ್ತಾರವಾದ ಹೆಸರಘಟ್ಟ ಕೆರೆಯಂಗಳವಿದೆ. ಕೆರೆಯಂಗಳದ ಸುತ್ತ ಇರುವ 356 ಪ್ರದೇಶ ಬೆಂಗಳೂರಿನಲ್ಲಿ ಉಳಿದಿರುವ ಕೊನೆಯ ಹುಲ್ಲುಗಾವಲು ಆವಾಸಸ್ಥಾನ. ಅದನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ಪ್ರದೇಶದಲ್ಲಿ 235 ಪ್ರಭೇದದ ಪಕ್ಷಿಗಳು, 400 ಪ್ರಭೇದದ ಕೀಟಗಳು, 100 ವಿಧದ ಚಿಟ್ಟೆಗಳು ಕಾಣಸಿಗುತ್ತವೆ ಎಂಬುದು ಅಧ್ಯಯನದಿಂದ ದೃಢಪಟ್ಟಿದೆ. ಅದನ್ನು ಹಾಗೆಯೇ ಉಳಿಸಿಕೊಳ್ಳಬೇಕು’ ಎಂದು ಅಭಿಯಾನದ ಮನವಿಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೆಸರಘಟ್ಟದ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶವೆಂದು ಘೋಷಿಸುವ ಮೂಲಕ ರಕ್ಷಿಸಬೇಕು ಎಂದು ಪರಿಸರ ಪ್ರೇಮಿಗಳು ಆನ್ಲೈನ್ ವೇದಿಕೆಯಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ.</p>.<p>Jhatkaa.org ವೆಬ್ಸೈಟ್ ಮೂಲಕ SaveHesaraghatta ಎಂಬ ಅಭಿಯಾನ ನಡೆಯುತ್ತಿದೆ. ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶ ಘೋಷಿಸಬೇಕೆಂಬ ಬೇಡಿಕೆ ಪರವಾಗಿ ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಇದೆ. ಈವರೆಗೆ 41,625 ಮಂದಿ ಸಹಿ ಮಾಡುವ ಮೂಲಕ ಆನ್ಲೈನ್ ಅಭಿಯಾನವನ್ನು ಬೆಂಬಲಿಸಿದ್ದಾರೆ.</p>.<p>ಹೆಸರಘಟ್ಟ ಸುತ್ತಮುತ್ತಲಿನ 5,010 ಎಕರೆ ಪ್ರದೇಶವನ್ನು ‘ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಪ್ರದೇಶ’ ಎಂದು ಘೋಷಿಸುವ ಪ್ರಸ್ತಾವ ರಾಜ್ಯ ವನ್ಯಜೀವಿ ಮಂಡಳಿಗೆ ಸಲ್ಲಿಕೆಯಾಗಿತ್ತು. ಈ ಪ್ರಸ್ತಾವವನ್ನು ಮಂಡಳಿಯು 2021ರ ಜನವರಿ 19ರಂದು ನಡೆದ ಸಭೆಯಲ್ಲಿ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಪರಿಸರಾಸಕ್ತರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಸ್ತಾವದ ಕುರಿತು ಪುನಃ ಚರ್ಚಿಸಿ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಮಂಡಳಿಗೆ ನಿರ್ದೇಶನ ನೀಡಿತ್ತು.</p>.<p>ಸೆಪ್ಟೆಂಬರ್ 5ರಂದು ನಡೆಯುವ ವನ್ಯಜೀವಿ ಮಂಡಳಿ ಸಭೆಯ ಕಾರ್ಯಸೂಚಿಯಲ್ಲಿ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಿತ ಪ್ರದೇಶ ಘೋಷಣೆಯ ಪ್ರಸ್ತಾವ ಇದೆ. ಪುನಃ ಪ್ರಸ್ತಾವವನ್ನು ತಿರಸ್ಕರಿಸಿ, ಯೋಜನೆಯೊಂದಕ್ಕೆ ಈ ಪ್ರದೇಶದ ಜಮೀನನ್ನು ಬಳಕೆ ಮಾಡಲು ಒಪ್ಪಿಗೆ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನದಿಂದ ಪರಿಸರಾಸಕ್ತರು ಅಭಿಯಾನ ಆರಂಭಿಸಿದ್ದಾರೆ.</p>.<p>‘1,912 ಎಕರೆಯಷ್ಟು ವಿಸ್ತಾರವಾದ ಹೆಸರಘಟ್ಟ ಕೆರೆಯಂಗಳವಿದೆ. ಕೆರೆಯಂಗಳದ ಸುತ್ತ ಇರುವ 356 ಪ್ರದೇಶ ಬೆಂಗಳೂರಿನಲ್ಲಿ ಉಳಿದಿರುವ ಕೊನೆಯ ಹುಲ್ಲುಗಾವಲು ಆವಾಸಸ್ಥಾನ. ಅದನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ಪ್ರದೇಶದಲ್ಲಿ 235 ಪ್ರಭೇದದ ಪಕ್ಷಿಗಳು, 400 ಪ್ರಭೇದದ ಕೀಟಗಳು, 100 ವಿಧದ ಚಿಟ್ಟೆಗಳು ಕಾಣಸಿಗುತ್ತವೆ ಎಂಬುದು ಅಧ್ಯಯನದಿಂದ ದೃಢಪಟ್ಟಿದೆ. ಅದನ್ನು ಹಾಗೆಯೇ ಉಳಿಸಿಕೊಳ್ಳಬೇಕು’ ಎಂದು ಅಭಿಯಾನದ ಮನವಿಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>