ಗೋಕರ್ಣ: ಸರ್ಕಾರದ ಆದೇಶದಂತೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. 15 ದಿನ ಸ್ಥಳೀಯರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಕಡ್ಡಾಯವಾಗಿ ಮುಖಗವಸು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು ಎಂದು ದೇವಸ್ಥಾನದ ಆಡಳಿತಧಿಕಾರಿ ಜಿ.ಕೆ.ಹೆಗಡೆ ತಿಳಿಸಿದ್ದಾರೆ.
ಗರ್ಭಗುಡಿಗೆ ಪ್ರವೇಶವಿಲ್ಲ:ಸ್ಥಳೀಯರಿಗೂ ನಂದಿಗೃಹದವರೆಗೆ ಮಾತ್ರ ಹೋಗಲು ಅವಕಾಶವಿದ್ದು, ಅಲ್ಲಿಂದಲೇ ನಿಂತು ದರ್ಶನ ಪಡೆಯಬೇಕು ಎಂದು ತಿಳಿಸಿದ್ದಾರೆ. ಸರ್ಕಾರದ ಸೂಚನೆಯಂತೆ ತೀರ್ಥ ಮತ್ತು ಪ್ರಸಾದ ವಿತರಣೆ ಇರುವುದಿಲ್ಲ ಎಂದು ಜಿ.ಕೆ.ಹೆಗಡೆ ತಿಳಿಸಿದ್ದಾರೆ.