<p><strong>ಕಮಲನಗರ (ಬೀದರ್ ಜಿಲ್ಲೆ)</strong>: ತಾಲ್ಲೂಕಿನ ಗಂಗನಬೀಡ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಮರಾಠಿ ಮಾಧ್ಯಮ)ಯ ಕಟ್ಟಡ ಶಿಥಿಲಗೊಂಡಿದ್ದು,ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ.</p>.<p>ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಈ ಶಾಲೆಯಲ್ಲಿ 1 ರಿಂದ 6ನೇ ತರಗತಿಯವರೆಗೆ 143 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 1996-97ನೇ ಸಾಲಿನಲ್ಲಿ ಸರ್ವ ಶಿಕ್ಷಣ ಅಭಿಯಾನದಡಿ ಶಾಲಾ ಕೊಠಡಿ, ಶೌಚಾಲಯ ನಿರ್ಮಿಸಲಾಗಿದೆ.ಶಾಲಾ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿರುವ ಪ್ಲಾಸ್ಟರ್ ಕಳಚಿದ್ದು, ಕಬ್ಬಿಣದ ಕಂಬಿಗಳು ಕಾಣಿಸುತ್ತಿವೆ.</p>.<p>ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಹೀಗಾಗಿಮಕ್ಕಳು ಶಾಲೆಯಲ್ಲಿ ಕೂರಲು ಹಿಂಜರಿಯುತ್ತಾರೆ.</p>.<p>ಮಕ್ಕಳನ್ನು ಮರದ ನೆರಳಿನಲ್ಲಿ ಇಲ್ಲವೇ ಬಯಲಲ್ಲಿಯೇ ಕೂರಿಸಿ ಶಿಕ್ಷಕರು ಪಾಠ ಮಾಡುತ್ತಾರೆ. ಮುಳ್ಳು ಕಂಟಿಗ<br />ಳಿಂದ ಆವೃತವಾಗಿರುವ ಶಾಲಾ ಆವರಣದ ಸುತ್ತ ಗ್ರಾಮಸ್ಥರು ಮಲ ವಿಸರ್ಜನೆ ಮಾಡುತ್ತಿದ್ದು, ಇದರಿಂದದುರ್ವಾಸನೆ ಬರುತ್ತದೆ. ಬಯಲಲ್ಲಿ ಕುಳಿತರೂ ಮಕ್ಕಳಿಗೆ ನೆಮ್ಮದಿ ಇಲ್ಲವಾಗಿದೆ.</p>.<p>‘ಶಾಲಾ ಆವರಣದಲ್ಲಿ ಕೊಳವೆಬಾವಿ ಕೊರೆಸದ ಕಾರಣ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಶೌಚಾಲಯದ ಬಾಗಿಲಿಗೆ ಬೀಗ ಜಡಿಯಲಾಗಿದೆ.ಶಾಲೆಯ ಈ ದುಸ್ಥಿತಿಯ ಬಗ್ಗೆಅಧಿಕಾರಿಗಳ ಗಮನ ಸೆಳೆದಿದ್ದೇವೆ. ಸ್ಥಳಕ್ಕೆ ಭೇಟಿ ನೀಡಿದ್ದಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಯ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇನ್ನೂ ಸ್ಥಳಾಂತರ ಪ್ರಕ್ರಿಯೆ ನಡೆದಿಲ್ಲ’ ಎಂದು ಗ್ರಾಮದ ಅಂಕುಶ್ ವಾಡೀಕರ್ ತಿಳಿಸಿದರು.</p>.<p>‘ಶಾಲೆಯ ಕಟ್ಟಡ ನಿರ್ಮಾಣಕ್ಕೆ ಸ್ಥಳದ ಕೊರತೆ ಇದೆ. ಉಪವಿಭಾಗಾಧಿಕಾರಿ ಅವರ ಗಮನಕ್ಕೆ ತರಲಾಗಿದ್ದು, 15 ದಿನಗಳಲ್ಲಿ ಸ್ಥಳ ಗುರುತಿಸಲಾಗುವುದು. ಕೆಕೆಆರ್ಡಿಬಿ ಅನುದಾನದಲ್ಲಿ ಕಟ್ಟಡ ನಿರ್ಮಿಸಲಾಗುವುದು’ ಎಂದು ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ. ಮಂಜುನಾಥ ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ (ಬೀದರ್ ಜಿಲ್ಲೆ)</strong>: ತಾಲ್ಲೂಕಿನ ಗಂಗನಬೀಡ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಮರಾಠಿ ಮಾಧ್ಯಮ)ಯ ಕಟ್ಟಡ ಶಿಥಿಲಗೊಂಡಿದ್ದು,ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ.</p>.<p>ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಈ ಶಾಲೆಯಲ್ಲಿ 1 ರಿಂದ 6ನೇ ತರಗತಿಯವರೆಗೆ 143 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 1996-97ನೇ ಸಾಲಿನಲ್ಲಿ ಸರ್ವ ಶಿಕ್ಷಣ ಅಭಿಯಾನದಡಿ ಶಾಲಾ ಕೊಠಡಿ, ಶೌಚಾಲಯ ನಿರ್ಮಿಸಲಾಗಿದೆ.ಶಾಲಾ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿರುವ ಪ್ಲಾಸ್ಟರ್ ಕಳಚಿದ್ದು, ಕಬ್ಬಿಣದ ಕಂಬಿಗಳು ಕಾಣಿಸುತ್ತಿವೆ.</p>.<p>ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಹೀಗಾಗಿಮಕ್ಕಳು ಶಾಲೆಯಲ್ಲಿ ಕೂರಲು ಹಿಂಜರಿಯುತ್ತಾರೆ.</p>.<p>ಮಕ್ಕಳನ್ನು ಮರದ ನೆರಳಿನಲ್ಲಿ ಇಲ್ಲವೇ ಬಯಲಲ್ಲಿಯೇ ಕೂರಿಸಿ ಶಿಕ್ಷಕರು ಪಾಠ ಮಾಡುತ್ತಾರೆ. ಮುಳ್ಳು ಕಂಟಿಗ<br />ಳಿಂದ ಆವೃತವಾಗಿರುವ ಶಾಲಾ ಆವರಣದ ಸುತ್ತ ಗ್ರಾಮಸ್ಥರು ಮಲ ವಿಸರ್ಜನೆ ಮಾಡುತ್ತಿದ್ದು, ಇದರಿಂದದುರ್ವಾಸನೆ ಬರುತ್ತದೆ. ಬಯಲಲ್ಲಿ ಕುಳಿತರೂ ಮಕ್ಕಳಿಗೆ ನೆಮ್ಮದಿ ಇಲ್ಲವಾಗಿದೆ.</p>.<p>‘ಶಾಲಾ ಆವರಣದಲ್ಲಿ ಕೊಳವೆಬಾವಿ ಕೊರೆಸದ ಕಾರಣ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಶೌಚಾಲಯದ ಬಾಗಿಲಿಗೆ ಬೀಗ ಜಡಿಯಲಾಗಿದೆ.ಶಾಲೆಯ ಈ ದುಸ್ಥಿತಿಯ ಬಗ್ಗೆಅಧಿಕಾರಿಗಳ ಗಮನ ಸೆಳೆದಿದ್ದೇವೆ. ಸ್ಥಳಕ್ಕೆ ಭೇಟಿ ನೀಡಿದ್ದಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಯ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇನ್ನೂ ಸ್ಥಳಾಂತರ ಪ್ರಕ್ರಿಯೆ ನಡೆದಿಲ್ಲ’ ಎಂದು ಗ್ರಾಮದ ಅಂಕುಶ್ ವಾಡೀಕರ್ ತಿಳಿಸಿದರು.</p>.<p>‘ಶಾಲೆಯ ಕಟ್ಟಡ ನಿರ್ಮಾಣಕ್ಕೆ ಸ್ಥಳದ ಕೊರತೆ ಇದೆ. ಉಪವಿಭಾಗಾಧಿಕಾರಿ ಅವರ ಗಮನಕ್ಕೆ ತರಲಾಗಿದ್ದು, 15 ದಿನಗಳಲ್ಲಿ ಸ್ಥಳ ಗುರುತಿಸಲಾಗುವುದು. ಕೆಕೆಆರ್ಡಿಬಿ ಅನುದಾನದಲ್ಲಿ ಕಟ್ಟಡ ನಿರ್ಮಿಸಲಾಗುವುದು’ ಎಂದು ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ. ಮಂಜುನಾಥ ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>