<p><strong>ಕೋಲಾರ:</strong> ‘ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ, ಸದ್ಯಕ್ಕೆ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಚಿ ಸಚಿವ ದಿವಂಗತ ಎಂ.ವಿ.ಕೃಷ್ಣಪ್ಪ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ‘ನನಗೆ ಆಪರೇಷನ್ ಕಮಲದ ಬಗ್ಗೆ ಗೊತ್ತಿಲ್ಲ, ಆದರೆ ಕಮಲದ ಬಗ್ಗೆ ಮಾತ್ರ ಗೊತ್ತು’ ಎಂದು ಹೇಳಿಕೆ ನೀಡಿದರು.</p>.<p>‘ಮಂಡ್ಯ ಜಿಲ್ಲೆಯಲ್ಲಿನ ರಾಜಕೀಯ ಬೆಳೆವಣಿಗೆಗಳ ಬಗ್ಗೆ ಮಾಹಿತಿಯಿಲ್ಲ. ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಷ್ ಸ್ಪರ್ಧಿಸುವ ಬಗ್ಗೆ ಏನು ಗೊತ್ತಿಲ್ಲ. ಜನ ಬಯಸುವ ಸರ್ಕಾರ ನಡೆಸಬೇಕುನ್ನುವುದು ಎಲ್ಲರ ಅಭಿಪ್ರಾಯ ಎಂದರು.</p>.<p>‘ಕೇಂದ್ರ ಸರ್ಕಾರ ಜನಪರ ಬಜೆಟ್ ಮಂಡಿಸಿದ್ದು, ಜನಪರವಾಗಿಯೇ ಇದೆ. ಇದಕ್ಕೆ ಯಾವುದೇ ರೀತಿ ವಿರೋಧ ವ್ಯಕ್ತವಾಗಿಲ್ಲ. ಬಿಜೆಪಿ ಪಕ್ಷ ನನಗೆ ಎಲ್ಲಾ ಕಾರ್ಯಕ್ರಮಗಳಿಗೂ ಆಹ್ವಾನ ನೀಡುತ್ತಿದೆ. ಅಗತ್ಯ ಇರುವ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗಿಯಾಗುತ್ತಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ, ಸದ್ಯಕ್ಕೆ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಚಿ ಸಚಿವ ದಿವಂಗತ ಎಂ.ವಿ.ಕೃಷ್ಣಪ್ಪ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ‘ನನಗೆ ಆಪರೇಷನ್ ಕಮಲದ ಬಗ್ಗೆ ಗೊತ್ತಿಲ್ಲ, ಆದರೆ ಕಮಲದ ಬಗ್ಗೆ ಮಾತ್ರ ಗೊತ್ತು’ ಎಂದು ಹೇಳಿಕೆ ನೀಡಿದರು.</p>.<p>‘ಮಂಡ್ಯ ಜಿಲ್ಲೆಯಲ್ಲಿನ ರಾಜಕೀಯ ಬೆಳೆವಣಿಗೆಗಳ ಬಗ್ಗೆ ಮಾಹಿತಿಯಿಲ್ಲ. ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಷ್ ಸ್ಪರ್ಧಿಸುವ ಬಗ್ಗೆ ಏನು ಗೊತ್ತಿಲ್ಲ. ಜನ ಬಯಸುವ ಸರ್ಕಾರ ನಡೆಸಬೇಕುನ್ನುವುದು ಎಲ್ಲರ ಅಭಿಪ್ರಾಯ ಎಂದರು.</p>.<p>‘ಕೇಂದ್ರ ಸರ್ಕಾರ ಜನಪರ ಬಜೆಟ್ ಮಂಡಿಸಿದ್ದು, ಜನಪರವಾಗಿಯೇ ಇದೆ. ಇದಕ್ಕೆ ಯಾವುದೇ ರೀತಿ ವಿರೋಧ ವ್ಯಕ್ತವಾಗಿಲ್ಲ. ಬಿಜೆಪಿ ಪಕ್ಷ ನನಗೆ ಎಲ್ಲಾ ಕಾರ್ಯಕ್ರಮಗಳಿಗೂ ಆಹ್ವಾನ ನೀಡುತ್ತಿದೆ. ಅಗತ್ಯ ಇರುವ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗಿಯಾಗುತ್ತಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>