<p><strong>ಎಚ್.ಡಿ. ಕೋಟೆ (ಮೈಸೂರು ಜಿಲ್ಲೆ):</strong> ‘ಪಾಕಿಸ್ತಾನದ ವಿರುದ್ಧ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸೇನೆಯವರಿಗಷ್ಟೇ ಸಲ್ಲಬೇಕು. ಯಾವ ಪಕ್ಷವೂ ಅದನ್ನು ಕ್ಲೇಮ್ ಮಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.</p>.<p>ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದಿದ್ದ ಯುದ್ಧಕ್ಕೂ- ಇವತ್ತಿನ ಸಂದರ್ಭಕ್ಕೂ ಹೋಲಿಸಿ ಮಾತನಾಡುವುದಿಲ್ಲ. ಆಗಿನ ಪರಿಸ್ಥಿತಿಗಳೇ ಬೇರೆ, ಇವತ್ತಿನವೇ ಬೇರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ‘ಎಕ್ಸ್’ ಬಗ್ಗೆಯಾಗಲೀ, ಪಾಕಿಸ್ತಾನದವರು ಮಾಡಿದ ಕದನ ವಿರಾಮ ಉಲ್ಲಂಘನೆಯ ಬಗ್ಗೆಯಾಗಲೀ ನಾನು ಮಾತನಾಡುವುದಿಲ್ಲ’ ಎಂದರು.</p>.<p>‘ಕದನ ವಿರಾಮ ಘೋಷಣೆಯಾಗಿದ್ದು, ಎರಡೂ ದೇಶಗಳವರು ಒಪ್ಪಿಕೊಂಡಿರುವುದನ್ನು ಸ್ವಾಗತಿಸುತ್ತೇನೆ. ಘೋಷಣೆಗೂ ಮುನ್ನ ಕೇಂದ್ರ ಸರ್ಕಾರವು ಸರ್ವಪಕ್ಷಗಳ ಸಭೆ ಹಾಗೂ ವಿಶೇಷ ಅಧಿವೇಶನವನ್ನೂ ಕರೆಯಬೇಕಿತ್ತು. ಗಂಭೀರ ವಿಷಯವಾಗಿದ್ದರಿಂದ, ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸಬಹುದಿತ್ತು’ ಎಂದರು.</p>.<p>‘ರಾಜ್ಯದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಹೊರಗೆ ಕಳುಹಿಸಿದ್ದು, ಮೈಸೂರಿನಲ್ಲಿ ಮೂವರು ಮಕ್ಕಳಷ್ಟೇ ಇದ್ದಾರೆ. ಅವರನ್ನು ಹೊರಗೆ ಕಳುಹಿಸಲು ತಾಂತ್ರಿಕ ಸಮಸ್ಯೆ ಇದೆ. ಗಂಡ ಪಾಕಿಸ್ತಾನಿ, ಹೆಂಡತಿ ಮೈಸೂರಿನವಳು. ಹೀಗಾಗಿ ಆರು ವರ್ಷದೊಳಗಿನವರಾದ ಮಕ್ಕಳ ವಿಚಾರದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ. ಕೋಟೆ (ಮೈಸೂರು ಜಿಲ್ಲೆ):</strong> ‘ಪಾಕಿಸ್ತಾನದ ವಿರುದ್ಧ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸೇನೆಯವರಿಗಷ್ಟೇ ಸಲ್ಲಬೇಕು. ಯಾವ ಪಕ್ಷವೂ ಅದನ್ನು ಕ್ಲೇಮ್ ಮಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.</p>.<p>ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದಿದ್ದ ಯುದ್ಧಕ್ಕೂ- ಇವತ್ತಿನ ಸಂದರ್ಭಕ್ಕೂ ಹೋಲಿಸಿ ಮಾತನಾಡುವುದಿಲ್ಲ. ಆಗಿನ ಪರಿಸ್ಥಿತಿಗಳೇ ಬೇರೆ, ಇವತ್ತಿನವೇ ಬೇರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ‘ಎಕ್ಸ್’ ಬಗ್ಗೆಯಾಗಲೀ, ಪಾಕಿಸ್ತಾನದವರು ಮಾಡಿದ ಕದನ ವಿರಾಮ ಉಲ್ಲಂಘನೆಯ ಬಗ್ಗೆಯಾಗಲೀ ನಾನು ಮಾತನಾಡುವುದಿಲ್ಲ’ ಎಂದರು.</p>.<p>‘ಕದನ ವಿರಾಮ ಘೋಷಣೆಯಾಗಿದ್ದು, ಎರಡೂ ದೇಶಗಳವರು ಒಪ್ಪಿಕೊಂಡಿರುವುದನ್ನು ಸ್ವಾಗತಿಸುತ್ತೇನೆ. ಘೋಷಣೆಗೂ ಮುನ್ನ ಕೇಂದ್ರ ಸರ್ಕಾರವು ಸರ್ವಪಕ್ಷಗಳ ಸಭೆ ಹಾಗೂ ವಿಶೇಷ ಅಧಿವೇಶನವನ್ನೂ ಕರೆಯಬೇಕಿತ್ತು. ಗಂಭೀರ ವಿಷಯವಾಗಿದ್ದರಿಂದ, ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸಬಹುದಿತ್ತು’ ಎಂದರು.</p>.<p>‘ರಾಜ್ಯದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಹೊರಗೆ ಕಳುಹಿಸಿದ್ದು, ಮೈಸೂರಿನಲ್ಲಿ ಮೂವರು ಮಕ್ಕಳಷ್ಟೇ ಇದ್ದಾರೆ. ಅವರನ್ನು ಹೊರಗೆ ಕಳುಹಿಸಲು ತಾಂತ್ರಿಕ ಸಮಸ್ಯೆ ಇದೆ. ಗಂಡ ಪಾಕಿಸ್ತಾನಿ, ಹೆಂಡತಿ ಮೈಸೂರಿನವಳು. ಹೀಗಾಗಿ ಆರು ವರ್ಷದೊಳಗಿನವರಾದ ಮಕ್ಕಳ ವಿಚಾರದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>