‘ಬುಟ್ಟಿ ಹೆಣೆಯುವುದು ಕುಲಕಸುಬು. ಪರಿಶಿಷ್ಟ ಪಂಗಡದ ನೈಜ ಬುಡಕಟ್ಟು ಸಮುದಾಯವಾಗಿರುವ ಕೊರಗರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಾಗಿ ನೆಲೆಸಿದ್ದಾರೆ. ಶಿವಮೊಗ್ಗ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಕೂಲಿ ಅರಸಿ ಕೆಲವು ಕುಟುಂಬಗಳು ವಲಸೆ ಹೋಗಿವೆ. ಉಚಿತ ಆರೋಗ್ಯ ಸೌಲಭ್ಯ ನಿರಾಕರಿಸಿದ್ದರಿಂದ ಗಂಭೀರ ಕಾಯಿಲೆಗೆ ಚಿಕಿತ್ಸೆ ಲಭಿಸದೆ ಕೆಲವು ದಿನಗಳ ಅಂತರದಲ್ಲಿ 12 ಮಂದಿ ಮೃತಪಟ್ಟಿದ್ದಾರೆ’ ಎಂದು ಅಲೆಮಾರಿ ಬುಡಕಟ್ಟು ಮಹಾಸಭಾದ ಸಂಘಟನಾ ಕಾರ್ಯದರ್ಶಿ ಸುಂದರ ‘ಪ್ರಜಾವಾಣಿ’ಗೆ ತಿಳಿಸಿದರು.