ಬೆಂಗಳೂರು: ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮತ್ತು ಸಲಹೆಗಾರ ಬಿ.ಆರ್. ಪಾಟೀಲ ಅವರನ್ನು ಅನರ್ಹತೆಯಿಂದ ರಕ್ಷಿಸಲು ‘ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) ಕಾಯ್ದೆ’ಗೆ ತಿದ್ದುಪಡಿ ತರುವ ಮಸೂದೆಗೆ ಸಂಪುಟ ಒಪ್ಪಿಗೆ ನೀಡಿದೆ.