<p><strong>ಬೆಂಗಳೂರು:</strong> ವಿವಿಧ ಇಲಾಖೆಗಳಲ್ಲಿರುವ ಹೊರ ಗುತ್ತಿಗೆ ವ್ಯವಸ್ಥೆಯನ್ನು ತೆಗೆದುಹಾಕಲು ಮತ್ತು ಪರ್ಯಾಯ ವ್ಯವಸ್ಥೆಗೆ ಕಾನೂನು ರೂಪಿಸಬಹುದೇ ಎಂಬ ಕುರಿತು ವಿವರವಾದ ವರದಿ ನೀಡುವಂತೆ ಕಾನೂನು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಕಾನೂನು ಸಚಿವ ಎಚ್.ಕೆ. ಪಾಟೀಲ ನಿರ್ದೇಶನ ನೀಡಿದ್ದಾರೆ.</p>.<p>ರಾಜ್ಯದಾದ್ಯಂತ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ಧೇಶ ಸಹಕಾರ ಸಂಘ ಸ್ಥಾಪಿಸುವ ಕುರಿತು ಪರಾಮರ್ಶಿಸಿ, ಸೂಕ್ತ ಶಿಫಾರಸು ಮಾಡಲು ರಚಿಸಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದಾರೆ.</p>.<p>ಆರೋಗ್ಯ, ಗಣಿ, ಇಂಧನ, ನಗರಾಭಿವೃದ್ಧಿ ಸೇರಿದಂತೆ ಕೆಲವು ಇಲಾಖೆಗಳಲ್ಲಿ ಅಪಾಯಕಾರಿ ಕೆಲಸಗಳಿಗೆ ಹೊರ ಗುತ್ತಿಗೆಯಡಿ ಸಾವಿರಾರು ನೌಕರರು ನೇಮಕಗೊಂಡಿದ್ದಾರೆ. ಈ ಸಿಬ್ಬಂದಿಯನ್ನು ಒಳಗುತ್ತಿಗೆ ಅಥವಾ ಕಾಯಮಾತಿಗೊಳಿಸುವ ಮೂಲಕ ಉದ್ಯೋಗ ಭದ್ರತೆ ಒದಗಿಸಲು ಏನೇನು ಕ್ರಮ ತೆಗೆದುಕೊಳ್ಳಬಹುದೆಂಬ ಬಗ್ಗೆಯೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.</p>.<p>ಸುಪ್ರೀಂ ಕೋರ್ಟ್ ಆಗಸ್ಟ್ 19ರಂದು ಪ್ರಕರಣವೊಂದರಲ್ಲಿ ನೀಡಿದ್ದ ತೀರ್ಪಿನಲ್ಲಿ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ಕುರಿತಂತೆ ಕೆಲವು ಅಂಶಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. ಈ ಅಂಶಗಳನ್ನು ಗಣನೆಗೆ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದೂ ಅವರು ತಿಳಿಸಿದ್ದಾರೆ.</p>.<p>ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿವಿಧ ಇಲಾಖೆಗಳಲ್ಲಿರುವ ಹೊರ ಗುತ್ತಿಗೆ ವ್ಯವಸ್ಥೆಯನ್ನು ತೆಗೆದುಹಾಕಲು ಮತ್ತು ಪರ್ಯಾಯ ವ್ಯವಸ್ಥೆಗೆ ಕಾನೂನು ರೂಪಿಸಬಹುದೇ ಎಂಬ ಕುರಿತು ವಿವರವಾದ ವರದಿ ನೀಡುವಂತೆ ಕಾನೂನು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಕಾನೂನು ಸಚಿವ ಎಚ್.ಕೆ. ಪಾಟೀಲ ನಿರ್ದೇಶನ ನೀಡಿದ್ದಾರೆ.</p>.<p>ರಾಜ್ಯದಾದ್ಯಂತ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ಧೇಶ ಸಹಕಾರ ಸಂಘ ಸ್ಥಾಪಿಸುವ ಕುರಿತು ಪರಾಮರ್ಶಿಸಿ, ಸೂಕ್ತ ಶಿಫಾರಸು ಮಾಡಲು ರಚಿಸಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದಾರೆ.</p>.<p>ಆರೋಗ್ಯ, ಗಣಿ, ಇಂಧನ, ನಗರಾಭಿವೃದ್ಧಿ ಸೇರಿದಂತೆ ಕೆಲವು ಇಲಾಖೆಗಳಲ್ಲಿ ಅಪಾಯಕಾರಿ ಕೆಲಸಗಳಿಗೆ ಹೊರ ಗುತ್ತಿಗೆಯಡಿ ಸಾವಿರಾರು ನೌಕರರು ನೇಮಕಗೊಂಡಿದ್ದಾರೆ. ಈ ಸಿಬ್ಬಂದಿಯನ್ನು ಒಳಗುತ್ತಿಗೆ ಅಥವಾ ಕಾಯಮಾತಿಗೊಳಿಸುವ ಮೂಲಕ ಉದ್ಯೋಗ ಭದ್ರತೆ ಒದಗಿಸಲು ಏನೇನು ಕ್ರಮ ತೆಗೆದುಕೊಳ್ಳಬಹುದೆಂಬ ಬಗ್ಗೆಯೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.</p>.<p>ಸುಪ್ರೀಂ ಕೋರ್ಟ್ ಆಗಸ್ಟ್ 19ರಂದು ಪ್ರಕರಣವೊಂದರಲ್ಲಿ ನೀಡಿದ್ದ ತೀರ್ಪಿನಲ್ಲಿ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ಕುರಿತಂತೆ ಕೆಲವು ಅಂಶಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. ಈ ಅಂಶಗಳನ್ನು ಗಣನೆಗೆ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದೂ ಅವರು ತಿಳಿಸಿದ್ದಾರೆ.</p>.<p>ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>