‘ವೈದ್ಯರು, ನರ್ಸ್, ಪೊಲೀಸರು, ಆಶಾಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿರುವವರಿಗೆ ಆರ್ಥಿಕ ನೆರವು ನೀಡುವ ಹಾಗೂ ಸನ್ಮಾನಿಸುವ ಮೂಲಕ ಆರೋಪಿಗಳಿಗೆ ದೇಶದ್ರೋಹಿಗಳನ್ನು ಬೆಂಬಲಿಸಿದ್ದಾರೆ. ಅವರಿಗೆಪಾಪಪ್ರಜ್ಞೆ ಕಾಡದಂತೆ ಮಾಡಿರುವುದು ಅಪರಾಧ ಕೃತ್ಯಗಳಿಗೆ ಕುಮ್ಮಕ್ಕು ಕೊಟ್ಟಂತಾಗಲಿದೆ. ಸಮಾಜಕ್ಕೆ ಮಾತ್ರವಲ್ಲ ಕಾಂಗ್ರೆಸ್ ಪಕ್ಷಕ್ಕೂ ಜಮೀರ್ ನಡೆ ಮುಜುಗರ ಉಂಟು ಮಾಡಿರುವುದರಲ್ಲಿ ಎರಡು ಮಾತಿಲ್ಲ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.