ತಾಲ್ಲೂಕಿನ ಪಾಳ್ಯ ಗ್ರಾಮದ ಸಂತೋಷ್ (32), ಅವರ ಪತ್ನಿ ಸೌಮ್ಯ (27), ಮಗಳು ನಿತ್ಯ ಸಾಕ್ಷಿ (4), ಮಗ ಅಭಿಷೇಕ್ (9) ಮೃತ ಪಟ್ಟವರು.
ಸಂಕ್ರಾಂತಿ ಹಬ್ಬಕ್ಕೆ ಬಟ್ಟೆ ಖರೀದಿಸುವ ಸಲುವಾಗಿ ಸಂತೋಷ್ ಅವರು ಕುಟುಂಬ ಸಮೇತರಾಗಿ ಬೈಕ್ನಲ್ಲಿ ಕೊಳ್ಳೇಗಾಲಕ್ಕೆ ಬರುತ್ತಿದ್ದರು. ಈ ವೇಳೆ, ಜಿನಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಭತ್ತ ಕಟಾವು ಮಾಡುವ ಯಂತ್ರವು ಬೈಕ್ಗೆ ಡಿಕ್ಕಿ ಹೊಡೆಯಿತು. ಯಂತ್ರವು 30 ಮೀಟರ್ ದೂರಕ್ಕೆ ಬೈಕ್ನಲ್ಲಿದ್ದವರನ್ನು ಎಳೆದುಕೊಂಡು ಹೋಗಿದೆ. ದಾರಿಯಲ್ಲಿ ಬರುತ್ತಿದ್ದ ವಾಹನ ಸವಾರರು ಕೂಗಿಕೊಂಡಾಗ ಕಟಾವು ಯಂತ್ರವನ್ನು ನಿಲ್ಲಿಸಿದ ಚಾಲಕ, ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾದರು.
ಮೂವರು ಸ್ಥಳದಲ್ಲೇ ಮೃತಪಟ್ಟರು. ಆದರೆ ಬಾಲಕ ಅಭಿಷೇಕ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಚಾಲಕನ ಅಜಾಗರೂಕತೆಯಿಂದ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರಕ್ಕೆ ತಂದಿದ್ದಾರೆ. ಶವಾಗಾರದ ಮುಂದೆ ಗ್ರಾಮಸ್ಥರು ಜಮಾಯಿಸಿದ್ದಾರೆ.