<p><strong>ಬೆಂಗಳೂರು:</strong> ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.</p><p>ರಾಜ್ಯದ ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p><p>ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಹಾಗೂ ಮಧುಸೂದನ್ ರಾವ್ (ತೆಲಂಗಾಣ ಮೂಲ) ಉಗ್ರರ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.</p><p>ಈ ಘಟನೆಯಲ್ಲಿ 26 ಜನ ಮೃತಪಟ್ಟು, 17 ಜನ ಗಾಯಗೊಂಡಿದ್ದಾರೆ. ಕೃತ್ಯ ಎಸಗಿದವರ ಸದೆಬಡಿಯಲು ಸೇನೆ ಕಾರ್ಯಾಚರಣೆ ಆರಂಭಿಸಿದೆ. </p>.Pahalgam Terror Attack: ಉಗ್ರರ ದಾಳಿ ಕೈವಾಡ ನಿರಾಕರಿಸಿದ ಪಾಕ್.Pahalgam Terror Attack: 5.5 ಲಕ್ಷ ಮಸೀದಿಗಳಿಂದ ಭಯೋತ್ಪಾದಕರಿಗೆ ಕಟು ಸಂದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.</p><p>ರಾಜ್ಯದ ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p><p>ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಹಾಗೂ ಮಧುಸೂದನ್ ರಾವ್ (ತೆಲಂಗಾಣ ಮೂಲ) ಉಗ್ರರ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.</p><p>ಈ ಘಟನೆಯಲ್ಲಿ 26 ಜನ ಮೃತಪಟ್ಟು, 17 ಜನ ಗಾಯಗೊಂಡಿದ್ದಾರೆ. ಕೃತ್ಯ ಎಸಗಿದವರ ಸದೆಬಡಿಯಲು ಸೇನೆ ಕಾರ್ಯಾಚರಣೆ ಆರಂಭಿಸಿದೆ. </p>.Pahalgam Terror Attack: ಉಗ್ರರ ದಾಳಿ ಕೈವಾಡ ನಿರಾಕರಿಸಿದ ಪಾಕ್.Pahalgam Terror Attack: 5.5 ಲಕ್ಷ ಮಸೀದಿಗಳಿಂದ ಭಯೋತ್ಪಾದಕರಿಗೆ ಕಟು ಸಂದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>