<p><strong>ಬಳ್ಳಾರಿ:</strong> ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಕಪ್ಪು ಪಟ್ಟಿ ಧರಿಸಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಕಚೇರಿಗೆ ಮುತ್ತಿಗೆ ಹಾಕಿದರು.</p><p>ನಗರದ ಮೋತಿ ಸರ್ಕಲ್ನಲ್ಲಿ ಮೊದಲಿಗೆ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ನಂತರ ಮೆರವಣಿಗೆ ಮೂಲಕ ಬುಡಾ ಕಟ್ಟಡದಲ್ಲಿರುವ ನಾಸಿರ್ ಹುಸೇನ್ ಕಚೇರಿಯತ್ತ ತೆರಳಿದರು. </p><p>ಈ ವೇಳೆ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ನಡೆಸಿದರು. ಆಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. </p><p>ಈ ಮಧ್ಯೆ ಕೆಲವರು ಕಚೇರಿ ನಾಮ ಫಲಕಕ್ಕೆ ಮಸಿ ಬಳಿಯಲು ಯತ್ನಿಸಿದರಾದರೂ ಪೊಲೀಸರು ಅವರ ಪ್ರಯತ್ನ ವಿಫಲಗೊಳಿಸಿದರು. </p><p>ಕಚೇರಿಯ ನಾಮಫಲಕ ಕಿತ್ತು ಹಾಕಲು ಪ್ರತ್ನಿಸಿದರಾದರೂ ಪೊಲೀಸರು ಅದನ್ನೂ ತಡೆದರು. </p><p>ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಭದ್ರತೆಗಾಗಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದೆ.</p>.ವಿಧಾನಸೌಧ ಕಾರಿಡಾರ್ನಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ: ಬಿಜೆಪಿ ಆರೋಪ.‘ಪಾಕಿಸ್ತಾನ ಜಿಂದಾಬಾದ್’ ಕೂಗಿದ್ದು ಸಾಬೀತಾದರೆ ಗಂಭೀರ ಶಿಕ್ಷೆ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಕಪ್ಪು ಪಟ್ಟಿ ಧರಿಸಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಕಚೇರಿಗೆ ಮುತ್ತಿಗೆ ಹಾಕಿದರು.</p><p>ನಗರದ ಮೋತಿ ಸರ್ಕಲ್ನಲ್ಲಿ ಮೊದಲಿಗೆ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ನಂತರ ಮೆರವಣಿಗೆ ಮೂಲಕ ಬುಡಾ ಕಟ್ಟಡದಲ್ಲಿರುವ ನಾಸಿರ್ ಹುಸೇನ್ ಕಚೇರಿಯತ್ತ ತೆರಳಿದರು. </p><p>ಈ ವೇಳೆ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ನಡೆಸಿದರು. ಆಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. </p><p>ಈ ಮಧ್ಯೆ ಕೆಲವರು ಕಚೇರಿ ನಾಮ ಫಲಕಕ್ಕೆ ಮಸಿ ಬಳಿಯಲು ಯತ್ನಿಸಿದರಾದರೂ ಪೊಲೀಸರು ಅವರ ಪ್ರಯತ್ನ ವಿಫಲಗೊಳಿಸಿದರು. </p><p>ಕಚೇರಿಯ ನಾಮಫಲಕ ಕಿತ್ತು ಹಾಕಲು ಪ್ರತ್ನಿಸಿದರಾದರೂ ಪೊಲೀಸರು ಅದನ್ನೂ ತಡೆದರು. </p><p>ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಭದ್ರತೆಗಾಗಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದೆ.</p>.ವಿಧಾನಸೌಧ ಕಾರಿಡಾರ್ನಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ: ಬಿಜೆಪಿ ಆರೋಪ.‘ಪಾಕಿಸ್ತಾನ ಜಿಂದಾಬಾದ್’ ಕೂಗಿದ್ದು ಸಾಬೀತಾದರೆ ಗಂಭೀರ ಶಿಕ್ಷೆ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>