ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಸಾಹಿತಿ ನಾ.ಡಿಸೋಜಾಗೆ ಪಂಪ ಪ್ರಶಸ್ತಿ; ಇತರ ಪ್ರಶಸ್ತಿಗಳ ವಿವರ ಹೀಗಿದೆ...

Published 25 ಜನವರಿ 2024, 10:31 IST
Last Updated 25 ಜನವರಿ 2024, 11:06 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರಿಗೆ 2023–24ನೇ ಸಾಲಿನ ಪಂಪ ಪ್ರಶಸ್ತಿ ಲಭಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಗುರುವಾರ ಪ್ರಶಸ್ತಿ ಪಟ್ಟಿ ಪ್ರಕಟಿಸಿದೆ. ಇದರೊಂದಿಗೆ ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ ವಿಭಾಗ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಇಲಾಖೆ ಪ್ರಕಟಿಸಿದೆ.

ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ (2022–23), ಬೆಳಗಾವಿಯ ಚಂದ್ರಕಾಂತ ಪೋಕಳೆ (2023–24)

ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್ (2022–23), ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ (2023–24)

ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ (2022–23), ಮಂಗಳೂರಿನ ಸದಾನಂದ ಸುವರ್ಣ (2023–24)

ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ (2022–23) , ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ (2023–24)

ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ. ಮೊಗಳ್ಳಿ ಗಣೇಶ್ (2021–22), ಉತ್ತಮ ಕಾಂಬ್ಳೆ (2022–23), ದಾವಣಗೆರೆಯ ಬಿ.ಟಿ.ಜಾಹ್ನವಿ (2023–24)

ಈ ಪ್ರಶಸ್ತಿಗಳು ತಲಾ ₹5 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಬರಗೂರು ರಾಮಚಂದ್ರಪ್ಪ ಅವರು ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದ ಪ್ರಶಸ್ತಿಗಳಿಗೆ

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಬೆಂಗಳೂರಿನ ಕೆ. ಮರುಳಸಿದ್ದಪ್ಪ (2020–21), ಬೆಳಗಾವಿಯ ಹಸನ್‌ ನಯೀಂ ಸುರಕೋಡ (2021–22), ಕೋಲಾರದ ಕೆ. ರಾಮಯ್ಯ (2022–23), ಬಳ್ಳಾರಿಯ ವೀರಸಂಗಯ್ಯ (2023–24)

ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್ (2020–21), ಮಂಡ್ಯದ ಡಾ. ಆರ್.ಸುನಂದಮ್ಮ (2021–22), ಕಲಬುರಗಿಯ ಮೀನಾಕ್ಷಿ ಬಾಳಿ (2022–23), ಬೆಂಗಳೂರಿನ ಡಾ. ವಸುಂಧರಾ ಭೂಪತಿ (2023–24)

ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ (2021–22), ಮಂಗಳೂರಿನ ಡಾ. ಬಿ.ಶಿವರಾಮ ಶೆಟ್ಟಿ (2022–23)

ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಬಿ.ಟಿ.ಲಲಿತಾ ನಾಯಕ್ ಅವರು ಈ ಪ್ರಶಸ್ತಿಗಳ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

ಕಲಾ ಪ್ರಶಸ್ತಿ ವಿಭಾಗ

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಮೈಸೂರಿನ ಜಿ.ಎಲ್.ಎನ್.ಸಿಂಹ (2022–23), ಕಲಬುರಗಿಯ ಬಸವರಾಜ್ ಎಲ್. ಜಾನೆ (2023–24)

ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ (2022–23), ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ (2023–24)

ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ (2022–23), ಚಿತ್ರದುರ್ಗದ ಹಲಗೆ ದುರ್ಗಮ್ಮ (2023–24)

ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಡಾ. ವಿ.ಟಿ.ಕಾಳೆ ಅವರು ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದರು.

ಸಂಗೀತ, ನೃತ್ಯ ಪ್ರಶಸ್ತಿ ವಿಭಾಗ

ನಿಜಗುಣ–ಪುರಂದರ ಪ್ರಶಸ್ತಿ: ಮೈಸೂರಿನ ಎಂ.ಕೆ.ಸರಸ್ವತಿ (2022–23), ಧಾರವಾಡದ ಅಕ್ಕಮಹಾದೇವಿ ಮಠ (2023–24)

ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ (2022–23), ಮೈಸೂರಿನ ಕೃಷ್ಣಗಿರಿ ರಾಮಚಂದ್ರ (2023–24)

ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್ (2022–23), ಬೆಂಗಳೂರಿನ ರೇವತಿ ನರಸಿಂಹನ್‌ (2023–24)

ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌ (2022–23), ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ (2023–24)

ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಡಾ. ನರಸಿಂಹಲು ವಡವಾಡಿ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT