<p><strong>ಬೆಂಗಳೂರು:</strong> ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರವಾಗಿ ₹15,601 ಕೋಟಿ ವೆಚ್ಚದಲ್ಲಿ ಮತ್ತೊಂದು ಅಣೆಕಟ್ಟೆ ನಿರ್ಮಿಸಲು ಸಿದ್ಧತೆ ನಡೆಯುತ್ತಿದ್ದು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಕಾಂಗ್ರೆಸ್ನ ಬಸನಗೌಡ ಬಾದರ್ಲಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. 132 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯ 100 ಟಿಎಂಸಿ ಅಡಿಗೆ ಇಳಿದೆ. ಈ ಕೊರತೆ ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಹತ್ತಿರ ಸಮತೋಲನ ಜಲಾಶಯ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದರು.</p>.<p>ಯೋಜನಾ ವೆಚ್ಚ ಒಳಗೊಂಡ ವಿವರವಾದ ವರದಿಯನ್ನು ತುಂಗಭದ್ರಾ ಮಂಡಳಿಗೆ ಈಗಾಗಲೇ ಸಲ್ಲಿಸಲಾಗಿದೆ. ಅಂತರರಾಜ್ಯ ಯೋಜನೆಯಾದ ಕಾರಣ ತೆಲಂಗಾಣ, ಆಂಧ್ರ ಪ್ರದೇಶಗಳ ಜತೆ ಚರ್ಚಿಸಲು ಸಮಯ ಕೋರಿ ಪತ್ರ ಬರೆಯಲಾಗಿದೆ ಎಂದು ವಿವರ ನೀಡಿದರು.</p>.ಸಮಾನಾಂತರ ಜಲಾಶಯ ನಿರ್ಮಾಣ ಕುರಿತು ಚರ್ಚಿಸಲು ನಾಯ್ಡು ಭೇಟಿ ಶೀಘ್ರ: ಡಿಕೆಶಿ.<p><strong>ಕೃಷ್ಣಾ: ಸ್ವಾಧೀನ ಬಾಕಿ 1.04 ಲಕ್ಷ ಎಕರೆ</strong></p><p>ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ 1.04 ಲಕ್ಷ ಎಕರೆ, 566 ಕಟ್ಟಡಗಳನ್ನು ಸ್ವಾಧೀನಪಡಿಸಿಕೊಳ್ಳುವುದು ಬಾಕಿ ಇದೆ ಶಿವಕುಮಾರ್ ಹೇಳಿದರು.</p><p>ಬಿಜೆಪಿಯ ಹಣಮಂತ ನಿರಾಣಿ, ಪಿ.ಎಚ್. ಪೂಜಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಹಿಂದೆ ನಡೆದ ಸಭೆಯ ನಿರ್ಣಯ, ಐತೀರ್ಪಿನ ಪರಿಷ್ಕರಣೆ ಹಾಗೂ ಯೋಜನೆಯ ಪರಿಷ್ಕೃತ ಅಂದಾಜು ಪ್ರಸ್ತಾವನೆಗಳ ಅನುಮೋದನೆಗಾಗಿ ಸಚಿವ ಸಂಪುಟದ ಮುಂದೆ ಮಂಡಿಸಲು ಸಿದ್ಧತೆ ನಡೆದಿದೆ ಎಂದು ಅವರು <br>ತಿಳಿಸಿದರು.</p>.<p><strong>ನೀರು ಬಳಕೆದಾರರಿಗೆ ‘ಅಪೆಕ್ಸ್’</strong> </p><p>ನೀರು ಬಳಕೆದಾರರ ಸಹಕಾರ ಸಂಘಗಳ ರಾಜ್ಯಮಟ್ಟದ ಶೃಂಗ ಮಹಾಮಂಡಲ (ಅಪೆಕ್ಸ್) ರಚನೆ ಪ್ರಕ್ರಿಯೆ ಆರಂಭವಾಗಿದ್ದು, ಮುಖ್ಯ ಪ್ರವರ್ತಕರನ್ನು ನೇಮಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.</p><p>ಕಾಂಗ್ರೆಸ್ನ ಮಧು ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನೀರಾವರಿ ಬಳಕೆದಾರರ ಸಂಘಗಳ ನಿರ್ವಹಣೆಗಾಗಿ ಈಗ ನೀಡುತ್ತಿರುವ ವಾರ್ಷಿಕ ಅನುದಾನ ₹1 ಲಕ್ಷ ಮೊತ್ತವನ್ನು ₹2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ನಿರ್ವಹಣಾ ಕಾಮಗಾರಿಗಳನ್ನು ಸಂಘಗಳಿಗೆ ವಹಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರವಾಗಿ ₹15,601 ಕೋಟಿ ವೆಚ್ಚದಲ್ಲಿ ಮತ್ತೊಂದು ಅಣೆಕಟ್ಟೆ ನಿರ್ಮಿಸಲು ಸಿದ್ಧತೆ ನಡೆಯುತ್ತಿದ್ದು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಕಾಂಗ್ರೆಸ್ನ ಬಸನಗೌಡ ಬಾದರ್ಲಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. 132 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯ 100 ಟಿಎಂಸಿ ಅಡಿಗೆ ಇಳಿದೆ. ಈ ಕೊರತೆ ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಹತ್ತಿರ ಸಮತೋಲನ ಜಲಾಶಯ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದರು.</p>.<p>ಯೋಜನಾ ವೆಚ್ಚ ಒಳಗೊಂಡ ವಿವರವಾದ ವರದಿಯನ್ನು ತುಂಗಭದ್ರಾ ಮಂಡಳಿಗೆ ಈಗಾಗಲೇ ಸಲ್ಲಿಸಲಾಗಿದೆ. ಅಂತರರಾಜ್ಯ ಯೋಜನೆಯಾದ ಕಾರಣ ತೆಲಂಗಾಣ, ಆಂಧ್ರ ಪ್ರದೇಶಗಳ ಜತೆ ಚರ್ಚಿಸಲು ಸಮಯ ಕೋರಿ ಪತ್ರ ಬರೆಯಲಾಗಿದೆ ಎಂದು ವಿವರ ನೀಡಿದರು.</p>.ಸಮಾನಾಂತರ ಜಲಾಶಯ ನಿರ್ಮಾಣ ಕುರಿತು ಚರ್ಚಿಸಲು ನಾಯ್ಡು ಭೇಟಿ ಶೀಘ್ರ: ಡಿಕೆಶಿ.<p><strong>ಕೃಷ್ಣಾ: ಸ್ವಾಧೀನ ಬಾಕಿ 1.04 ಲಕ್ಷ ಎಕರೆ</strong></p><p>ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ 1.04 ಲಕ್ಷ ಎಕರೆ, 566 ಕಟ್ಟಡಗಳನ್ನು ಸ್ವಾಧೀನಪಡಿಸಿಕೊಳ್ಳುವುದು ಬಾಕಿ ಇದೆ ಶಿವಕುಮಾರ್ ಹೇಳಿದರು.</p><p>ಬಿಜೆಪಿಯ ಹಣಮಂತ ನಿರಾಣಿ, ಪಿ.ಎಚ್. ಪೂಜಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಹಿಂದೆ ನಡೆದ ಸಭೆಯ ನಿರ್ಣಯ, ಐತೀರ್ಪಿನ ಪರಿಷ್ಕರಣೆ ಹಾಗೂ ಯೋಜನೆಯ ಪರಿಷ್ಕೃತ ಅಂದಾಜು ಪ್ರಸ್ತಾವನೆಗಳ ಅನುಮೋದನೆಗಾಗಿ ಸಚಿವ ಸಂಪುಟದ ಮುಂದೆ ಮಂಡಿಸಲು ಸಿದ್ಧತೆ ನಡೆದಿದೆ ಎಂದು ಅವರು <br>ತಿಳಿಸಿದರು.</p>.<p><strong>ನೀರು ಬಳಕೆದಾರರಿಗೆ ‘ಅಪೆಕ್ಸ್’</strong> </p><p>ನೀರು ಬಳಕೆದಾರರ ಸಹಕಾರ ಸಂಘಗಳ ರಾಜ್ಯಮಟ್ಟದ ಶೃಂಗ ಮಹಾಮಂಡಲ (ಅಪೆಕ್ಸ್) ರಚನೆ ಪ್ರಕ್ರಿಯೆ ಆರಂಭವಾಗಿದ್ದು, ಮುಖ್ಯ ಪ್ರವರ್ತಕರನ್ನು ನೇಮಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.</p><p>ಕಾಂಗ್ರೆಸ್ನ ಮಧು ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನೀರಾವರಿ ಬಳಕೆದಾರರ ಸಂಘಗಳ ನಿರ್ವಹಣೆಗಾಗಿ ಈಗ ನೀಡುತ್ತಿರುವ ವಾರ್ಷಿಕ ಅನುದಾನ ₹1 ಲಕ್ಷ ಮೊತ್ತವನ್ನು ₹2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ನಿರ್ವಹಣಾ ಕಾಮಗಾರಿಗಳನ್ನು ಸಂಘಗಳಿಗೆ ವಹಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>